Share this news

 

ಕಾರ್ಕಳ: ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು 2024 – 25 ನೇ ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು.

ಕಾರ್ಕಳ ಎಸ್‌ವಿ ಎಜುಕೇಶನ್ ಟ್ರಸ್ಟ್ (ರಿ.)ನ ಕೋಶಾಧ್ಯಕ್ಷರಾದ ರವೀಂದ್ರನಾಥ್ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಸ್.ವಿ ಎಜುಕೇಶನ್ ಟ್ರಸ್ಟ್ ನ ಉಪಾಧ್ಯಕ್ಷರಾದ ಕಾರ್ಕಳ ಕಮಲಾಕ್ಷ ಕಾಮತ್ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಶುಭಾಶಯಗಳನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ಎಸ್ ವಿ ಟಿ ವನಿತಾ ಪದವಿಪೂರ್ವ ಕಾಲೇಜು ಕಾರ್ಕಳದ ನಿವೃತ್ತ ಪ್ರಾಚಾರ್ಯರಾದ ರಾಮದಾಸ ಪ್ರಭು, ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಮಾಲತಿ ವಸಂತ್ ರಾಜ್, ನಿವೃತ್ತ ಹಿರಿಯ ಸಹ ಶಿಕ್ಷಕಿ ಜೆ. ಕೃಷ್ಣವೇಣಿ, ಪ್ರೊಫೆಷನಲ್ ಮೇಕಪ್ ಆರ್ಟಿಸ್ಟ್ ಸುಪ್ರೀತಾ ಸಂತೋಷ್ ಕೋಟ್ಯಾನ್ , ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಕುಮಾರಿ ಪೃಥ್ವಿ ಶೆಟ್ಟಿ, ಉಪಾಧ್ಯಕ್ಷ ಮಾ.ಆಕಾಶ್, ಕಾರ್ಯದರ್ಶಿ ಕುಮಾರಿ ಸ್ವಾತಿ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಕೊಡುಗೈ ದಾನಿ ಕಾರ್ಕಳ ಕಮಲಾಕ್ಷ ಕಾಮತ್ ಅವರು ಕನ್ನಡ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕೊಡುಗೆಯಾಗಿ ನೀಡಿದ ಸಮವಸ್ತ್ರವನ್ನು ವಿತರಿಸಲಾಯಿತು. ಕಾರ್ಕಳ ಪ್ರಭಾ ಶೆಣೈ ಕೊಡುಗೆಯಾಗಿ ನೀಡಿದ ಸುಮಾರು 25 ಸಾವಿರ ರೂಪಾಯಿಯ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
ಕಾಲೇಜಿನ ಪ್ರಾಚಾರ್ಯರಾದ ನೇಮಿರಾಜ ಶೆಟ್ಟಿ ಕೆ ಸ್ವಾಗತಿಸಿದರು. ಪ್ರೌಢಶಾಲಾ ವಿಭಾಗದ ಹಿರಿಯ ಸಹ ಶಿಕ್ಷಕರಾದ ಯೋಗೇಂದ್ರ ನಾಯಕ್ ವಂದಿಸಿದರು. ಅಧ್ಯಾಪಕ ದೇವದಾಸ್ ಕೆರೆಮನೆ ನಿರೂಪಿಸಿ, ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದನಾ ಮಾತುಗಳನ್ನಾಡಿದರು.

 

 

 

 

 

 

 

Leave a Reply

Your email address will not be published. Required fields are marked *