ಕಾರ್ಕಳ: ಕಾರ್ಕಳ ತಾಲೂಕು ತಹಶಿಲ್ದಾರ್ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.
ತಹಶಿಲ್ದಾರ್ ನರಸಪ್ಪ ತಹಸೀಲ್ದಾರ್ ಅವರು ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿಗೆ ವರ್ಗಾವಣೆಗೊಂಡಿದ್ದು, ಕಾರ್ಕಳ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಗುರುದತ್ತ್ ಎಂ.ಎನ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕು ಪಂಚಾಯತ್ ಗೆ ವರ್ಗಾವಣೆ ಮಾಡಲಾಗಿದೆ.
ತಹಶಿಲ್ದಾರ್ ನರಸಪ್ಪ ಅವರು ಅಧಿಕಾರ ಸ್ವೀಕರಿಸಿದ ವರ್ಷದೊಳಗೆ ವರ್ಗಾವಣೆಗೊಂಡಿದ್ದು,ಕಾರ್ಕಳದ ಜನರ ಪ್ರಶಂಸೆಗೆ ಪಾತ್ರರಾಗಿದ್ದರು. ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಗುರುದತ್ತ್ ಎಂ.ಎನ್ ಅವರು ಕೂಡ ದಕ್ಷ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು
`