Share this news

ಕಾರ್ಕಳ: ಕಾರ್ಕಳದ ವ್ಯಕ್ತಿಯೊಬ್ಬರಿಗೆ ಸಿಬಿಐ ಅಧಿಕಾರಿಯ ಹೆಸರಿನಲ್ಲಿ ಬೆದರಿಕೆ ಹಾಕಿ, 24 ಲಕ್ಷ ರೂ. ನಗದನ್ನು ವರ್ಗಾಯಿಸಿಕೊಂಡು ವಂಚನೆ ಎಸಗಿರುವ ಪ್ರಕರಣ ನಡೆದಿದೆ.

ಪ್ರೀಮ ಶರಿಲ್ ಡಿಸೋಜ ಎಂಬವರಿಗೆ ಜ.7 ರಂದು ಅಪರಿಚಿತ ನಂಬರಿನಿAದ ಕರೆ ಬಂದಿದ್ದು, ಆ ಕಡೆಯಿಂದ ವ್ಯಕ್ತಿಯೊಬ್ಬ ತಾನು ದೆಹಲಿ ಟೆಲಿಕಾಂ ಇಲಾಖೆಯಿಂದ ಕಾಲ್ ಮಾಡುತ್ತಿದ್ದು ನಿಮ್ಮ ಆಧಾರ್ ನಂಬ್ರದಿAದ ಉತ್ತರ ಪ್ರದೇಶದಲ್ಲಿ ಬೇರೆ ಸಿಮ್ ಖರೀದಿಸಿ ಬೇರೆ ಬೇರೆ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿ ನಿಮ್ಮ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದು ಈ ಬಗ್ಗೆ ಸೈಬರ್ ಅಧಿಕಾರಿಯು ನಿಮ್ಮೊಂದಿಗೆ ಮಾತನಾಡುತ್ತಾರೆ ಎಂದು ತಿಳಿಸಿದ. ಬಳಿಕ ವೀಡಿಯೋ ಕಾಲ್ ಮಾಡಿ ಪೊಲೀಸ್ ಸಮವಸ್ತ್ರ ಧರಿಸಿದ ವ್ಯಕ್ತಿಯೊಬ್ಬ ತಾನು ಸಿಬಿಐ ಅಧಿಕಾರಿ, ನೀವು ತನಿಖೆಗೆ ಸಹಕರಿಸಬೇಕು ಈ ವಿಚಾರವನ್ನು ಯಾರ ಬಳಿಯಲ್ಲಿಯೂ ಹೇಳುವಂತಿಲ್ಲ ಹೇಳಿದರೆ ನಿಮ್ಮ ಗಂಡ ಮತ್ತು ಮಗುವಿಗೆ ತೊಂದರೆಯಾಗುತ್ತದೆ ಎಂದು ಹೇಳಿ ಪ್ರೀಮ ಶರಿಲ್ ಅವರ ಬ್ಯಾಂಕ್ ಖಾತೆಗಳಲ್ಲಿರುವ ಹಣದ ವಿವರ ಪಡೆದುಕೊಂಡು ಹಣವನ್ನು ಅವರು ತಿಳಿಸಿದ ಖಾತೆಗೆ ವರ್ಗಾವಣೆ ಮಾಡಬೇಕು ಇಲ್ಲವಾದರೆ ಅರೆಸ್ಟ್ ವಾರಂಟ್ ಕಳುಹಿಸುತ್ತೇವೆ ಬೆದರಿಸಿ, ತನ್ನ ಫೆಡರಲ್ ಬ್ಯಾಂಕ್‌ನ ಖಾತೆಗೆ 14 ಲಕ್ಷ ರೂ. ಮತ್ತು ಯೆಸ್ ಬ್ಯಾಂಕ್ ಖಾತೆಗೆ 10 ರೂ. ಲಕ್ಷ ಹಣವನ್ನು ಎಫ್‌ಡಿ ಖಾತೆಯಿಂದ ಆರ್‌ಟಿಜಿಎಸ್ ಮೂಲಕ ವರ್ಗಾವಣೆ ಮಾಡಿಸಿಕೊಂಡು ವಂಚನೆ ಎಸಗಿದ್ದಾನೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *