ಅಜೆಕಾರು: ಕಾರ್ಕಳ ತಾಲೂಕಿನ ಕೆರ್ವಾಶೆ ಎಂಬಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಕೆರ್ವಾಶೆಯ ಪ್ರಶಾಂತ್ (45) ಮೃತಪಟ್ಟವರು.
ಪ್ರಶಾಂತ್ ಅವರು ಸೋಮವಾರ ಮಧ್ಯಾಹ್ನ ತಮ್ಮ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ವಾಂತಿ ಮಾಡಿಕೊಂಡು ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಕಾರ್ಕಳ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತ. ಆದರೆ ಅವರು ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು. ಪ್ರಶಾಂತ್ ರವರು ತಲೆಸುತ್ತು ಹಾಗೂ ಪಿಡ್ಸ್ ಕಾಯಿಲೆಯಿಂದ ಬಳಲುತ್ತಿದ್ದು ಇದೇ ಕಾರಣದಿಂದ ಅಥವಾ ಇನ್ಯಾವುದೋ ಅಸೌಖ್ಯದ ಕಾರಣದಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗಿದ್ದು, ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
`