ಅಜೆಕಾರು : ಶ್ರೀ ವಿಷ್ಣು ಫ್ರೆಂಡ್ಸ್ ಅಜೆಕಾರು ಮತ್ತು ಶ್ರೀ ವಿಷ್ಣು ಮಹಿಳಾ ಘಟಕ ಅಜೆಕಾರು ಇವರ ಜಂಟಿ ಆಶ್ರಯದಲ್ಲಿ “ಕೆಸರ್ಡ್ ಒಂಜಿ ದಿನ” ಆಗಸ್ಟ್ 4ರಂದು ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಬಳಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಮಕ್ಕಳು ಮಹಿಳೆಯರು ಹಾಗೂ ಪುರುಷರಿಗಾಗಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಮರ್ಣೆ ಗ್ರಾಮಸ್ಥರಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ.
ವಿಶೇಷವಾಗಿ ಕಾರ್ಯಕ್ರಮದ ಸ್ಥಳದಲ್ಲಿ ಕೇಂದ್ರ ಸರ್ಕಾರ ಪ್ರಾಯೋಜಿತ ಆಕಸ್ಮಿಕ ಅಪಘಾತ ವಿಮೆ ಯೋಜನೆಯನ್ನು ನೋಂದಣಿ ಮಾಡಿಕೊಡಲಾಗುವುದು. ನೊಂದಣಿಗೆ ಆಧಾರ್ ಕಾರ್ಡ್ ಕಡ್ಡಾಯವಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಕಟಣೆ ತಿಳಿಸಿದೆ.


`