ಉಡುಪಿ: ಲೋಕಸಭಾ ಚುನಾವಣೆಯ ಮತ ಎಣಿಕೆ ಬಹುತೇಕ ಅಂತಿಮ ಹಂತಕ್ಕೆ ಬಂದಿದ್ದು, ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ 1,82,151 ಮತಗಳಿಂದ ಭರ್ಜರಿ ಜಯಗಳಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಕೆ ಜಯಪ್ರಕಾಶ್ ಹೆಗ್ಡೆ 3,45,563 ಲಕ್ಷ ಮತಗಳನ್ನು ಪಡೆದರೆ, ಕೋಟ ಶ್ರೀನಿವಾಸ ಪೂಜಾರಿ 5,27,714 ಲಕ್ಷ ಮತಗಳನ್ನು ಪಡೆದು 1,82,151 ಮತಗಳ ಅಂತರದ ಗೆಲುವು ಸಾಧಿಸಿದ್ದಾರೆ.
ಈ ಬಾರಿ ಶತಾಯಗತಾಯ ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಗೆಲ್ಲಕೇಬೇಕೆಂಬ ಜಿದ್ದಿಗೆ ಬಿದ್ದು ಪ್ರಬಲ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರನ್ನೇ ಕಣಕ್ಕೆ ಇಳಿಸಿತ್ತು.
ಆದರೆ ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿಯಲ್ಲಿ ಕಾಂಗ್ರೆಸ್ ಗೆ ಭಾರೀ ಹಿನ್ನಡೆಯಾಗಿದೆ.