ಕಾರ್ಕಳ: ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಳೆ ಏ19ರಂದು ಕಾರ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ ಮತಯಾಚನೆ ಮಾಡಲಿದ್ದಾರೆ.
ಕಾರ್ಕಳ ವಿಧಾನಸಭಾ ಕ್ಷೇತ್ರದ ಬೆಳ್ಮಣ್, ಬೈಲೂರು, ಅಜೆಕಾರು, ಬಜಗೋಳಿ ಹಾಗೂ ಹೆಬ್ರಿ ಬಿಜೆಪಿ ಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಬೆಳಗ್ಗೆ 8 ರಿಂದ ಶಾಸಕ ಸುನಿಲ್ ಕುಮಾರ್, ಮಂಡಲ ಅಧ್ಯಕ್ಷ ನವೀನ್ ನಾಯಕ್ ಸೇರಿದಂತೆ ಬಿಜೆಪಿಯ ಹಿರಿಯ ಮುಖಂಡರು ಮತಯಾಚನೆಯಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಕಾರ್ಕಳ ವಿಕಾಸ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ಹಾಗೂ ಸಂಜೆ 5.30ಕ್ಕೆ ಕಾರ್ಕಳ ಬಾಲಾಜಿ ಹೊಟೇಲ್ ನಲ್ಲಿ ಉದ್ಯಮಿಗಳ ಜತೆ ಸಭೆ ನಡೆಸಲಿದ್ದಾರೆ










