Share this news

ಕುಂದಾಪುರ : ಸಮುದ್ರದಲ್ಲಿ ಪ್ರವಾಸಿಗರನ್ನು ಕರೆದೊಯ್ಯತ್ತಿದ್ದ ಜೆಟ್ ಸ್ಕೀ ಬೋಟ್ ಪಲ್ಟಿಯಾದ ಪರಿಣಾಮ ರೈಡರ್ ಸಮುದ್ರ ಪಾಲಾದ ಘಟನೆ ತ್ರಾಸಿ ಕಡಲ ಕಿನಾರೆಯಲ್ಲಿ ಶನಿವಾರ ಸಂಜೆ ಸಂಭವಿಸಿದೆ.

ನಾಪತ್ತೆಯಾಗಿರುವವರನ್ನು ಜೆಟ್ ಸ್ಕೀ ರೈಡರ್ ರೋಹಿದಾಸ್ ಅಲಿಯಾಸ್ ರವಿ (45) ಎಂದು ಗುರುತಿಸಲಾಗಿದೆ. ಇವರ ಜೊತೆ ರೈಡ್ ಗೆ ತೆರಳಿದ್ದ ಬೆಂಗಳೂರಿನ ಪ್ರವಾಸಿಗನನ್ನು ರಕ್ಷಿಸಲಾಗಿದೆ. ತ್ರಾಸಿ ಕಡಲ ಕಿನಾರೆಯಲ್ಲಿ ಕಾರ್ಯಾಚರಿಸುತ್ತಿರುವ ಬೆಳುಗಾ ವಾಟರ್ ಸ್ಪೋರ್ಟ್ಸ್‌ನ ಜೆಟ್‌ಸ್ಕೀ ಬೋಟ್‌ನಲ್ಲಿ ಓರ್ವ ಪ್ರವಾಸಿಗನನ್ನು ಕೂರಿಸಿಕೊಂಡು ಸಮುದ್ರದಲ್ಲಿ ವಿಹಾರ ನಡೆಸಲಾಗುತ್ತಿತ್ತು. ಈ ವೇಳೆ ರೈಡರ್ ನಿಯಂತ್ರಣ ತಪ್ಪಿ ಜೆಟ್‌ಸ್ಕೀ ಮಗುಚಿ ಬಿದ್ದಿತ್ತು. ರೈಡ್‌ಗೂ ಮೊದಲು ಪ್ರವಾಸಿಗರಿಗೆ ಲೈಫ್ ಜಾಕೆಟ್ ಹಾಕಿ ಸುರಕ್ಷತಾ ಕ್ರಮ ವಹಿಸಿದ್ದರಿಂದ ಆತನನ್ನು ರಕ್ಷಿಸಲಾಗಿದೆ.

 

Leave a Reply

Your email address will not be published. Required fields are marked *