ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ಅಶ್ಲೀಲ ಪದ ಬಳಕೆ ಪ್ರಕರಣದಲ್ಲಿ ಎಂ.ಎಲ್.ಸಿ ಸಿ.ಟಿ ರವಿ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪ್ರಕರಣ ರದ್ಧುಕೋರಿ ಸಿ.ಟಿ ರವಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದು ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪರಿಷತ್ ಸದಸ್ಯ ಸಿ.ಟಿ ರವಿ ಅವರನ್ನು ತಕ್ಷಣವೇ ಬಿಡುಗಡೆಗೆ ಆದೇಶಿಸಿದೆ.
ವಾದ ಪ್ರತಿ ವಾದಗಳನ್ನು ಆಲಿಸಿದ ಹೈಕೋರ್ಟ್ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ತಕ್ಷಣವೇ ಬಿಡುಗಡೆಗೆ ಆದೇಶಿಸಿದೆ.
ಬೆಳಗಾವಿಯ ಜೆಎಂಎಫ್ ಸಿ ನ್ಯಾಯಾಲಯವು ಪರಿಷತ್ ಸದಸ್ಯ ಸಿ.ಟಿ ರವಿ ಅವರ ಪ್ರಕರಣ ತನ್ನ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿದ್ದ ಬಳಿಕ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಈ ಪ್ರಕರಣ ವರ್ಗಾವಣೆಯಾಗಿತ್ತು. ಹೀಗಾಗಿ ಸಿ.ಟಿ ರವಿ ಅವರನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಬೆಂಗಳೂರಿಗೆ ರಸ್ತೆ ಮಾರ್ಗದ ಮೂಲಕ ಕಾರಿನಲ್ಲಿ ಕರೆದೊಯ್ಯಲಾಗಿತ್ತು.
