ಉಡುಪಿ: ಅಂತರಾಷ್ಟ್ರೀಯ ಮಟ್ಟದ ಅತಿ ದೊಡ್ಡ ಸೇವಾ ಸಂಸ್ಥೆ ಲಯನ್ಸ್ ಇಂಟರ್ ನ್ಯಾಷನಲ್ ಸಂಸ್ಥೆಯ ಉಡುಪಿ ಶಿವಮೊಗ್ಗ ಭದ್ರಾವತಿ ಸೊರಬ ಹಾಗೂ ಇತರ ಜಿಲ್ಲೆಗಳನ್ನೊಳಗೊಂಡ ಲಯನ್ಸ್ ಜಿಲ್ಲೆ 317c ಸಂಪುಟ ಕಾರ್ಯದರ್ಶಿಯಾಗಿ ಕಾರ್ಕಳ ಹಿರಿಯಂಗಡಿಯ ಗಿರೀಶ್ ರಾವ್ ಆಯ್ಕೆಯಾಗಿದ್ದಾರೆ.
ಜೆಸಿಐ ಭಾರತದ ಮೂರು ರಾಷ್ಟ್ರೀಯ ವೈಯಕ್ತಿಕ ಪ್ರಶಸ್ತಿಗಳನ್ನು ಪಡೆದಿರುವ ಗಿರೀಶ್ ರಾವ್ ಪ್ರಸ್ತುತ ಕಾರ್ಕಳ ಶ್ರೀ ಕ್ಷೇತ್ರ ಹಿರಿಯಂಗಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿದ್ದಾರೆ.ಇದಲ್ಲದೇ ಲಯನ್ಸ್ ಕ್ಲಬ್ ಬ್ರಹ್ಮಗಿರಿ, ಉಡುಪಿ ಜಿಲ್ಲಾ ಅಮೆಚೂರ್ ಸ್ಪೋರ್ಟ್ಸ್ ಕ್ಲಬ್ ಸದಸ್ಯರಾಗಿದ್ದು, ಕಾರ್ಕಳ ಸಾಹಿತ್ಯ ಸಂಘದ ಸಂಘಟನಾ ಕಾರ್ಯದರ್ಶಿಯಾಗಿದ್ದಾರೆ.
ಮೆಸ್ಕಾಂ ನೌಕರರ ಸಂಘದ ಮಾಜಿ ಸಂಘಟನಾ ಕಾರ್ಯದರ್ಶಿಯಾಗಿದ್ದ ಗಿರೀಶ್ ರಾವ್ ಕೆಪಿಟಿಸಿಎಲ್ ಸಹಕಾರಿ ಸಂಘದ ಮಾಜಿ ನಿರ್ದೇಶಕರಾಗಿದ್ದರು. ಛತ್ರಪತಿ ಫೌಂಡೇಶನ್ ಸಂಸ್ಥೆಯ ಸ್ಥಾಪಕರಾಗಿರುವ ಗಿರೀಶ್ ರಾವ್ ಕಳೆದ 15 ವರ್ಷಗಳಿಂದ ನಿರಂತರವಾಗಿ ಸಾಮಾಜಿಕ ಸೇವೆಯನ್ನು ಸಲ್ಲಿಸುತ್ತಿದ್ದು ಕಳೆದ ಬಾರಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿತ್ತು










