ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ಓರ್ವ ಯುವಕನಿಗೆ ಬೆದರಿಕೆ ಸಂದೇಶ ಬಂದಿದೆ. “ನನ್ನ ಪ್ರೀತಿಸುವಂತೆ ನಿನ್ನ ಸಹೋದರಿಗೆ ಹೇಳು, ಇಲ್ಲ ನಿನ್ನನ್ನು 24 ತುಂಡು ಮಾಡುವೆ” ಎಂದು ಯುವಕನಿಗೆ ಮುಸ್ಲಿಂ ಸಮಾಜದ ವ್ಯಕ್ತಿ ಬೆದರಿಕೆ ಹಾಕಿದ್ದಾನೆ ಎಂದು ಯುವತಿಯೊಬ್ಬಳು ಆರೋಪಿಸಿದ್ದಾಳೆ.
ಆರೋಪಿ ಯುವತಿಯ ಫೇಸ್ ಬುಕ್ ಖಾತೆ ಹ್ಯಾಕ್ ಮಾಡಿ ಖಾತೆ ಮುಖಾಂತರ ಆಕೆಯ ಅಣ್ಣನಿಗೆ “ನನ್ನ ಜತೆ ಸಹಕರಿಸು, ಇಲ್ಲಾಂದ್ರೆ 24 ತುಂಡು ಮಾಡುವೆ” ಎಂದು ಸುರತ್ಕಲ್ ನ ಯುವಕ ಸಂದೇಶ ಕಳುಹಿಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ಯುವತಿಯ ಫೇಸ್ ಬುಕ್ ಖಾತೆ ಹ್ಯಾಕ್ ಮಾಡಿ ಅದರ ಮೂಲಕ ಆಕೆಯ ಸಹೋದರನಿಗೆ ಬೆದರಿಕೆ ಸಂದೇಶ ಮತ್ತು ಯುವತಿಗೆ ಮಾನಸಿಕವಾಗಿ ಕಿರುಕುಳ ನೀಡಿದ ಆರೋಪದ ಮೇಲೆ ಆರೋಪಿ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆಸಿದ ಸುರತ್ಕಲ್ ಪೊಲೀಸರು ಸದಾಶಿವನಗರದ ಶಾರಿಕ್ ನೂರ್ಜಹಾನ್ ಎಂಬುವನನ್ನು ವಶಕ್ಕೆ ಪಡೆದು ವಿಚಾರಣೆ ವೇಳೆ ಆರೋಪಿ ವಿರುದ್ಧ ಸಾಕ್ಷ್ಯ ಸಿಗದ ಹಿನ್ನೆಲೆಯಲ್ಲಿ ಆತನನ್ನು ಬಿಟ್ಟು ಕಳುಹಿಸಿದ್ದಾರೆ.
ಈ ಬಳಿಕವೂ ಆರೋಪಿ ಯುವತಿಯ ಸಹೋದರಿನಿಗೆ ನಿರಂತರ ಬೆದರಿಕೆ ಸಂದೇಶ ಕಳುಹಿಸಿದ ಹಿನ್ನೆಲೆಯಲ್ಲಿ ಮನನೊಂದ ಯುವತಿ ಡೆತ್ ನೋಟ್ ಬರೆದಿಟ್ಟು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಡೆತ್ ನೋಟ್ ನಲ್ಲಿ ಇಡ್ಯಾ ಸಮುದಾಯದ ಯುವಕ ಕಿರುಕುಳ ನೀಡುತ್ತಿದ್ದಾನೆ. ಪೊಲೀಸರಿಂದಲೂ ಯಾವುದೇ ನ್ಯಾಯ ಸಿಕ್ಕಿಲ್ಲ. ಒಬ್ಬ ಮುಸ್ಲಿಮನ ಕೈಯಲ್ಲಿ ಅತ್ಯಾಚಾರ ಆಗಿ ಸಾಯುವ ಬದಲು ಈಗಲೇ ಸಾಯುತ್ತೇನೆ. ಶಾರೀಕ್ ಹಾಗೂ ನೂರ್ಜಾನ್ ಇಬ್ಬರನ್ನೂ ಬಿಡಬಾರದು ಎಂದು ಬರೆದಿದ್ದಾಳೆ.
ಆತ್ಮಹತ್ಯಗೆ ಯತ್ನಿಸಿದ ಯುವತಿ ಮಾರ್ಚ್ ನಲ್ಲಿ ಜನರಲ್ ಸ್ಟೋರ್ ತೆರಳಿದ್ದಳು. ಈಕೆಯ ಅಂಗಡಿ ಮುಂದೆಯೇ ಆರೋಪಿಯ ಮನೆ ಇದ್ದು, ಯುವಕನ ಮನೆಯವರು ಅಂಗಡಿಗೆ ಬರುತ್ತಿದ್ದರು. ಯುವಕನ ತಾಯಿ ನೂರ್ ಜಹಾನ್ ಹಾಗೂ ಹುಡುಗಿಯ ತಾಯಿ ಕ್ಲೋಸ್ ಆಗಿದ್ದರು. ಆರೋಪಿ ತಾಯಿ ಒಂದು ದಿನ ಬಂದು ನಿಮ್ಮ ಮಗಳು ಚಂದ ಇದ್ದಾಳೆ, ನಮ್ಮ ಮಗನಿಗೆ ಕೊಟ್ಟು ಮದುವೆ ಮಾಡಿ ಅಂದರು. ಹುಡುಗಿಯ ತಾಯಿ ಕೂಡ ಆ ಕೂಡಲೇ ಬೈದಿದ್ದಾರೆ ಎಂದು ಯುವತಿಯ ಸ್ನೇಹಿತೆ ತಿಳಿಸಿದ್ದಾರೆ.
ಅಲ್ಲದೇ ಆರೋಪಿ ಅಂಗಡಿಯ ಗೂಗಲ್ ಪೇ ನಂಬರ್ ತೆಗೆದುಕೊಂಡು ಅದರಿಂದಲೇ ಮೆಸೇಜ್ ಮಾಡುತ್ತಿದ್ದ. ಗೂಗಲ್ ಪೇನಲ್ಲಿ ಅವನ ನಂಬರ್ ಬ್ಲಾಕ್ ಮಾಡಿದ್ದಳು. ಬಳಿಕ ಇನ್ಸ್ಟಾಗ್ರಾಂನಲ್ಲಿ ರಿಕ್ವೆಸ್ಟ್ ಕಳುಹಿಸಿದ್ದನು. ಯುವತಿ ಬ್ಯಾಂಕ್ ಅಕೌಂಟ್ ಚೇಂಜ್ ಮಾಡುವುದಾಗಿ ಹೇಳಿದ್ದಳು. ಒಂದು ದಿನ ಆರೋಪಿಯ ತಂಗಿ ಬಂದು ಈಕೆಯ ಮೊಬೈಲ್ ನ್ನು ಅವರ ಮನೆಗೆ ತೆಗೆದುಕೊಂಡು ಹೋಗಿದ್ದಳು. ಅಲ್ಲಿ ಏನು ಪಾಸ್ ವರ್ಡ್ ಬದಲಾಯಿಸಿದ್ದಾ ಗೊತ್ತಿಲ್ಲ. ಫೇಸ್ಬುಕ್ ಆಕೌಂಟ್ ಮತ್ತೆ ಓಪನ್ ಮಾಡಿದ್ದಾನೆ. ನನ್ನ ಗೆಳತಿಯ ಅಣ್ಣ, ಸ್ನೇಹಿತರಿಗೆ ಸಂದೇಶ ಕಳುಹಿಸಿದ್ದಾನೆ. ಆಕೆಯ ಮೇಲೆ ರೇಪ್ ಮಾಡುತ್ತೇನೆ, 24 ತುಂಡು ಮಾಡುತ್ತೇನೆ ಎಂದು ಹೇಳಿದ್ದಾನೆ ಎಂದು ತಿಳಿಸಿದ್ದಾರೆ.
ಪೊಲೀಸರು ಒಂದು ವಾರದ ಒಳಗೆ ಆರೋಪಿ ಪತ್ತೆ ಬಗ್ಗೆ ಭರವಸೆ ನೀಡಿದ್ದರು. ಶಾರೀಖ್ ನನ್ನು 24 ಗಂಟೆ ವಿಚಾರಣೆ ನಡೆಸಿ ಬಿಟ್ಟಿದ್ದಾರೆ. ಆತ ಅಂಗಡಿಯ ಸುತ್ತ ಸುತ್ತಿದ್ದಾನೆ. ಗುರುವಾರ ರಾತ್ರಿ ಮತ್ತೆ ಯುವತಿ ಅಣ್ಣನಿಗೆ ಸಂದೇಶ ಕಳುಹಿಸಿದ್ದಾನೆ. ಎಷ್ಟು ಸಾರಿ ನನ್ನನ್ನು ಜೈಲಿಗೆ ಕಳುಹಿಸಿದರು ಸಹ ಹೊರಗೆ ಬರುತ್ತೇನೆ ಎಂದು ಹೇಳಿದ್ದಾನೆ. ಇವತ್ತಿನಿಂದ ಗೇಮ್ ಸ್ಟಾರ್ಟ್ ಎಂದು ಹೇಳಿದ್ದಾನೆ ಎಂದು ಹೇಳಿದ್ದಾರೆ.