Share this news

 

ಮಂಗಳೂರು: ಮಂಗಳೂರು ನಗರ ಹೊರವಲಯದ ನೀರು ಮಾರ್ಗ ಸಮೀಪದ ಕೆಲರಾಯಿ ಎಂಬಲ್ಲಿ ಮನೆಯೊಂದರಲ್ಲಿ ಮೇಯಲು ಹೋಗಿ ವಾಪಸಾಗಿದ್ದ ದನಗಳು ನಿಗೂಢವಾಗಿ ಸಾವನ್ನಪ್ಪಿರುವ ಪ್ರಕರಣ ಬೆಳಕಿಗೆ ಬಂದಿದೆ.

ಕಳೆದ 50 ವರ್ಷಗಳಿಂದ ಹೈನುಗಾರಿಕೆ ನಡೆಸುತ್ತಿರುವ ಪ್ರಕಾಶ್ ಅವರ ದನಗಳು ನಿಗೂಢವಾಗಿ ಸಾವಿಗೀಡಾಗಿವೆ. ಅವರಲ್ಲಿ ಒಟ್ಟು 37 ದನಗಳಿದ್ದು, 7 ದನಗಳು ಮೃತಪಟ್ಟಿವೆ. ಕೆಲ ದಿನಗಳ ಹಿಂದೆ ಮನೆ ಸಮೀಪದ ಗುಡ್ಡ ಪ್ರದೇಶಕ್ಕೆ ಮೇಯಲು ಹೋಗಿದ್ದ ದನಗಳು ಅಸ್ವಸ್ಥ ಸ್ಥಿತಿಯಲ್ಲಿ ವಾಪಾಸು ಕೊಟ್ಟಿಗೆಗೆ ಬಂದಿದ್ದವು. ಮೇಯಲು ಹೋಗಿದ್ದ 12 ದನಗಳಲ್ಲಿ ಎರಡು ಗರ್ಭ ಧರಿಸಿದ್ದ ದನ ಸೇರಿದಂತೆ ಒಟ್ಟು ಏಳು ಜಾನುವಾರುಗಳು ಸಾವನ್ನಪ್ಪಿವೆ.

ಈ ಜಾನುವಾರುಗಳು ಕುತ್ತಿಗೆ ವಕ್ರವಾಗಿ ಕುಸಿದು ಬೀಳುತ್ತಿದ್ದು ಆಹಾರ ಸೇವಿಸಲು ಸಾಧ್ಯವಾಗದೆ ನರಳಿ ನರಳಿ‌ ಸಾವನ್ನಪ್ಪುತ್ತಿರುವ ದೃಶ್ಯ ಕರುಳು ಹಿಂಡುವಂತಿತ್ತು. ಪ್ರಕಾಶ್ ಅವರು ಈ ಜಾನುವಾರುಗಳಿಗೆ ಯಾರೋ ವಿರೋಧಿಗಳು ವಿಷಪ್ರಾಶನ ಮಾಡಿರುವ ಅನುಮಾನ ವ್ಯಕ್ತಪಡಿಸಿದ್ದು, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ತಾನು ಬಹಳ ಪ್ರೀತಿಯಿಂದ ದನ ಕರುಗಳನ್ನು ನೋಡಿಕೊಳ್ಳುತ್ತಿದ್ದು ಜಾನುವಾರುಗಳ ಅಕಾಲಿಕ ಸಾವಿನಿಂದ ಆಘಾತವಾಗಿದೆ. ಇತ್ತ ತಾಯಿಯನ್ನು ಕಳೆದುಕೊಂಡು ಕರುಗಳು ತಬ್ಬಲಿಯಾಗಿವೆ. ಯಾರದ್ದೋ ದ್ವೇಷಕ್ಕೆ ಮೂಕ ಪ್ರಾಣಿಗಳು ಬಲಿಯಾಗಿವೆ ಪ್ರಕಾಶ್ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

 

 

 

 

 

 

 

Leave a Reply

Your email address will not be published. Required fields are marked *