ಮಂಗಳೂರು: ವ್ಯಕ್ತಿಯೊಬ್ಬರು ಹೆಬ್ಬಾವಿನ ಮರಿಯೆಂದು ವಿಷಕಾರಿ ಕೊಳಕು ಮಂಡಲ ಹಾವಿನ ಮರಿಯನ್ನು ಹಿಡಿಯಲು ಯತ್ನಿಸಿ ಅದರಿಂದಲೇ ಕಚ್ಚಿಸಿಕೊಂಡು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಬಜ್ಪೆಯಲ್ಲಿ ನಡೆದಿದೆ.
ಬಂಟ್ವಾಳದ ರಾಮಚಂದ್ರ ಪೂಜಾರಿ (58) ಮೃತ ದುರ್ದೈವಿ.
ಬಂಟ್ವಾಳದ ರಾಮಚಂದ್ರ ಪೂಜಾರಿ ಮರವೂರಿನ ಮನೆಯೊಂದರಲ್ಲಿ ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದರು.
ಸೆಪ್ಟೆಂಬರ್ 4 ರಂದು ಮಧ್ಯಾಹ್ನ ಮನೆಯ ಮೆಟ್ಟಿಲು ಸಮೀಪ ಹಾವಿನ ಮರಿ ಕಾಣಿಸಿಕೊಂಡಿದೆ. ಹೆಬ್ಬಾವಿನ ಮರಿ ಎಂದು ಭಾವಿಸಿ ಕೊಳಕು ಮಂಡಲ ಮರಿಯನ್ನು ರಾಮಚಂದ್ರ ಪೂಜಾರಿ ಬರಿಗೈಯಲ್ಲಿ ಹಿಡಿದಿದ್ದಾರೆ.
ಈ ವೇಳೆ ರಾಮಚಂದ್ರ ಅವರ ಕೈಗೆ ಕೊಳಕು ಮಂಡಲ ಹಾವಿನ ಮರಿ ಕಡಿದಿದೆ. ಕಚ್ಚಿದ್ದು ಹೆಬ್ಬಾವಿನ ಮರಿ ಎಂದು ರಾಮಚಂದ್ರ ನಿರ್ಲಕ್ಷ್ಯ ಮಾಡಿದ್ದರು. ಆದರೆ, ಸ್ವಲ್ಪ ಹೊತ್ತಿನ ಬಳಿಕ ರಾಮಚಂದ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ರಾಮಚಂದ್ರ ಮೃತಪಟ್ಟಿದ್ದಾರೆ.
in