ಮಂಗಳೂರು : ನಿಷೇಧಿತ ಎಂಡಿಎಂಎ ಮಾದಕ ದ್ರವ್ಯ ಮಾರಾಟ ಮತ್ತು ಸಾಗಾಟದಲ್ಲಿ ತೊಡಗಿದ್ದ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ 70 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ.
ಬಂಧಿತ ವ್ಯಕ್ತಿಗಳನ್ನು ಶಿವಮೊಗ್ಗ ಟಿಪ್ಪು ನಗರದ ಅಬ್ದುಲ್ ಶಾಕೀರ್ (24), ಬಿ.ಎಸ್.ನಗರ, ಮಂಜೇಶ್ವರ, ಉದ್ಯಾವರ ನಿವಾಸಿ ಹಸನ್ ಆಶೀರ್ (34), ಕಣ್ಣೂರಿನ ಪಯ್ಯನೂರಿನ ಪೆರಿಂಗ0 ನಿವಾಸಿ ರಿಯಾಝ್ ಎ.ಕೆ (31), ಕಾಸರಗೋಡು ವರ್ಕಾಡಿ ಪಾವೂರು ಕೆದಂಬಾಡಿ ಮನೆ ನಿವಾಸಿ ಮಹಮ್ಮದ್ ನೌಶಾದ್ (22) ಮತ್ತು ಜಿಎಚ್ ಎಸ್ ರಸ್ತೆ, ಮಂಜೇಶ್ವರ, ಕಾಸರಗೋಡು ನಿವಾಸಿ ಯಾಸಿನ್ ಇಮ್ರಾಜ್ ಅಲಿಯಾಸ್ ಇಂಬು (35) ಎಂದು ಗುರುತಿಸಲಾಗಿದೆ.
ಮಂಗಳೂರು ನಗರದಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಎಂಡಿಎ0ಎ ಮಾರಾಟ ಮಾಡುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನೆತ್ತಿಲಪದವು ಬಳಿ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ 3,50,000 ಮೌಲ್ಯದ 70 ಗ್ರಾಂ ಎಂಡಿಎ0ಎ, ಐದು ಮೊಬೈಲ್ ಫೋನ್ ಗಳು, 1,460 ರೂಪಾಯಿ ನಗದು, ಡಿಜಿಟಲ್ ತೂಕದ ಮಾಪಕವನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ 4,25,500 ರೂ.ಆಗಿದ್ದು, ಆರೋಪಿಗಳ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಧಿತರಲ್ಲಿ ಹಸನ್ ಆಶೀರ್ ಮಂಜೇಶ್ವರ, ಕಾಸರಗೋಡಿನಲ್ಲಿ ಹಲ್ಲೆ ಮತ್ತು ಮಾದಕವಸ್ತು ಸಂಬ0ಧಿತ ಅಪರಾಧಗಳ ಹಿಂದಿನ ದಾಖಲೆಯನ್ನು ಹೊಂದಿದ್ದಾನೆ. ಯಾಸಿನ್ ಇಮ್ರಾಜ್ ಅವರು ಮಾದಕವಸ್ತು ಕಳ್ಳಸಾಗಣೆಗೆ ಸಂಬ0ಧಿಸಿದ ಎರಡು ಹಿಂದಿನ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.
ಕಾರ್ಯಾಚರಣೆಯಲ್ಲಿ ಸಿಸಿಬಿ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ ಐ ಶರಣಪ್ಪ ಭಂಡಾರಿ ಹಾಗೂ ಇತರ ಪೊಲೀಸ್ ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.