Share this news

ಮಂಗಳೂರು: ಪೆಟ್ರೋಲ್ ಬಂಕ್ ಸಿಬ್ಬಂದಿಯೊಬ್ಬ ತನ್ನದೇ ಕ್ಯುಆರ್ ಕೋಡ್ ಅನ್ನು ಬಂಕ್ ನಲ್ಲಿರಿಸಿ ಮಾಲೀಕರಿಗೆ ವಂಚಿಸಿದ ಘಟನೆ ಮಂಗಳೂರಿನ ಬಂಗ್ರಕುಳೂರು ಎಂಬಲ್ಲಿ ನಡೆದಿದೆ. ಆರೋಪಿ ಸಿಬ್ಬಂದಿ ಬರೋಬ್ಬರಿ 2 ವರ್ಷಗಳಿಂದ ಕೃತ್ಯ ಎಸಗುತ್ತಾ ಬಂದಿದ್ದು, ಕೊನೆಗೂ ಮಾಲೀಕರ ಅರಿವಿಗೆ ಬಂದಿದೆ. ಸದ್ಯ ಅವರು ನೀಡಿರುವ ದೂರಿನ ಮೇರೆಗೆ ಬಜ್ಪೆ ನಿವಾಸಿ ಮೋಹನದಾಸ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನ ಬಂಗ್ರಕುಳೂರು ಬಳಿಯ ರಿಲಯನ್ಸ್ ಔಟ್‌ಲೆಟ್‌ನಲ್ಲಿ ಬಂಕ್‌ನಲ್ಲಿ ತನ್ನದೇ ಕ್ಯುಆರ್ ಕೋಡ್ ಇರಿಸಿದ್ದ ಮೋಹನ್‌ದಾಸ್ 2 ವರ್ಷದಲ್ಲಿ ಬರೋಬ್ಬರಿ 58 ಲಕ್ಷ ರೂಪಾಯಿ ವಂಚನೆ ಎಸಗಿದ್ದಾನೆ. ಗ್ರಾಹಕರು ಪಾವತಿಗಾಗಿ ಬಳಸಲು ಬಂಕ್‌ನಲ್ಲಿಟ್ಟಿದ್ದ ಕ್ಯುಆರ್ ಕೋಡ್ ಅನ್ನು ತೆರವು ಮಾಡಿದ್ದ ಆರೋಪಿ ತನ್ನದೇ ಕ್ಯುಆರ್ ಕೋಡ್ ಇಟ್ಟಿದ್ದ. ಆದ್ದರಿಂದ ಗ್ರಾಹಕರು ಪಾವತಿ ಮಾಡಿದ ಹಣ ಸಿಬ್ಬಂದಿಯ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗುತ್ತಿತ್ತು. ಈತ ಸುಮಾರು 15 ವರ್ಷಗಳಿಂದ ಪೆಟ್ರೋಲ್ ಬಂಕ್‌ನಲ್ಲಿ ಕೆಲಸಕ್ಕಿದ್ದ ಎನ್ನಲಾಗಿದೆ. ಬಂಕ್‌ನ ಹಣಕಾಸು ವ್ಯವಹಾರ, ನಿರ್ವಹಣೆ ಜವಾಬ್ದಾರಿ ಹೊತ್ತಿದ್ದ ಮೋಹನದಾಸ, 10-03-2020 ರಿಂದ 31-07-2022ರವರೆಗೆ ಕ್ಯುಆರ್ ಕೋಡ್ ಬದಲಿಸಿದ್ದ.

ಆರೋಪಿ ವಿರುದ್ಧ ರಿಲಯನ್ಸ್ ಕಂಪನಿ ಮ್ಯಾನೇಜರ್ ಸಂತೋಷ್ ಮ್ಯಾಥ್ಯೂ ದೂರು ನೀಡಿದ್ದು, ಮಂಗಳೂರಿನ ಸೈಬರ್ ಕ್ರೈಂ ಮತ್ತು ಎಕನಾಮಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಮೋಹನದಾಸನನ್ನು ಬಂಧಿಸಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *