Share this news

ಮಣಿಪಾಲ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ಬಳಿಕ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಎರಡೂ ಕಾರುಗಳು ಗುದ್ದಿದ ಘಟನೆ ಮಣಿಪಾಲ ಈಶ್ವರನಗರದಲ್ಲಿ ಇಂದು ನಡೆದಿದೆ.

ಅದೃಷ್ಟವಶಾತ್ ಎರಡು ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಣಿಪಾಲ ಕಡೆಯಿಂದ ಬಂದ ಕಾರನ್ನು ಚಾಲಕನು ಗರೋಡಿ ರಸ್ತೆಗೆ ತೆರಳುವ ಸಲುವಾಗಿ ಒಮ್ಮೇಲೆ ಎಡಕ್ಕೆ ತಿರುಗಿದ್ದಾನೆ.

ಈ ವೇಳೆ ಹಿಂದಿನಿಂದ ಅತೀ ವೇಗದಲ್ಲಿ ಬರುತ್ತಿದ್ದ ರಿಡ್ಜ್ ಕಾರು ಡಿಕ್ಕಿ ಹೊಡೆದಿದೆ. ಚಾಲಕನು ನಿಯಂತ್ರಣ ಕಳೆದುಕೊಂಡ ಪರಿಣಾಮ ಕಾರು ಡಿಕ್ಕಿ ಹೊಡೆದು, ಬಳಿಕ ಅಲ್ಲೇ ಇದ್ದ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಎರಡು ಕಾರುಗಳು ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಡಿಕ್ಕಿ ಹೊಡೆದಿವೆ. ಇದರ ಪರಿಣಾಮ ಎರಡು ಕಾರುಗಳು ಜಖಂಗೊಂಡಿವೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಹಾನಿ ಸಂಭವಿಸಿದೆ. ಈಶ್ವರ್ ನಗರದಲ್ಲಿ ‘ತುರ್ತು ಕಾಮಗಾರಿ ಪ್ರಗತಿಯಲ್ಲಿದೆ ನಿಧಾನವಾಗಿ ಚಲಿಸಿ’ ಎಂಬ ಬೋರ್ಡ್ ಹಾಕಲಾಗಿದೆ. ಆದರೂ ವಾಹನಗಳ ವೇಗ ಮಾತ್ರ ನಿಂತಿಲ್ಲ‌. ಈಗಾಗಲೇ ಇಲ್ಲಿ ಸಾಕಷ್ಟು ಅಪಘಾತಗಳು ಸಂಭವಿಸಿವೆ.

                        

                          

                        

                          

 

`

Leave a Reply

Your email address will not be published. Required fields are marked *