Share this news

ಮಣಿಪಾಲ: ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತಾ ಅರಿವು ಕಾರ್ಯಕ್ರಮ ಜರುಗಿತು.

ಮಣಿಪಾಲ ಪೊಲಿಸ್ ಠಾಣೆಯ ಎ.ಎಸ್.ಐ. ನಾಗೇಶ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸರಕಾರ ಹಾಗೂ ಪೋಲಿಸ್ ಇಲಾಖೆಯ ಪ್ರಾಯೋಜಿತ ಕಾರ್ಯಕ್ರಮ ‘ರಸ್ತೆ ಸುರಕ್ಷಾ ಮಾಸಾಚರಣೆ’ಯ ಮಹತ್ವ ಇಂದಿನ ಯುವಜನತೆಗೆ ಇಂತಹ ಕಾರ್ಯಕ್ರಮಗಳ ಅಗತ್ಯತೆಗಳ ಕುರಿತು ವಿವರಿಸಿ, ವಿದ್ಯಾರ್ಥಿಗಳ ಸಂದೇಹಗಳಿಗೂ ಉತ್ತರಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ, ಉಪನ್ಯಾಸಕ- ಉಪನ್ಯಾಸಕೇತರ ವರ್ಗ ಉಪಸ್ಥಿತರಿದ್ದರು.
ಆಂಗ್ಲಭಾಷಾ ಉಪನ್ಯಾಸಕಿ ಶ್ರೀಮತಿ ಶಮಿತಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *