Share this news

 

ಬೆಂಗಳೂರು: ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನ ಆಗಸ್ಟ್ 11ರಿಂದ ಆರಂಭವಾಗಲಿದ್ದು, 2 ವಾರಗಳ ಕಾಲ ನಡೆಯಲಿದೆ.

ಕಾಂಗ್ರೆಸ್ ಸರ್ಕಾರ ಈಗಷ್ಟೇ ಎರಡು ವರ್ಷಗಳ ಅಧಿಕಾರಾವಧಿಯನ್ನು ಪೂರೈಸಿದೆ. ಅಧಿವೇಶನದಲ್ಲಿ ಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ಸರ್ಕಾರದ ಮೇಲೆ ಮುಗಿಬೀಳಲು ಸಜ್ಜಾಗಿದ್ದು, ಆರ್ ಸಿಬಿ ವಿಜಯೋತ್ಸವ ಕಾಲ್ತುಳಿತ, ಮಂಗಳೂರು ಕೋಮುಗಲಭೆ, ರಾಜ್ಯದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ, ಇತರೆ ಇಲಾಖೆಯ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುವುದು, ಜನಗಣತಿ ಸೇರಿದಂತೆ ಹಲವು ಅಸ್ತ್ರಗಳನ್ನೇ ಮುಂದಿಟ್ಟುಕೊAಡುಸರ್ಕಾರವನ್ನು ಕಟ್ಟಿಹಾಕಲು ವಿಪಕ್ಷಗಳು ಅಣಿಯಾಗಿವೆ. ಪ್ರತ್ಯಾಸ್ತ್ರಗಳೊಂದಿಗೆ ಸರ್ಕಾರವೂ ಸಿದ್ಧವಾಗುತ್ತಿದೆ.

ಈವರೆಗಿನ ನಾಲ್ಕು ಅಧಿವೇಶನಗಳಿಗೆ ಹೋಲಿಸಿದರೆ ಈ ಬಾರಿ ವಿರೋಧ ಪಕ್ಷಗಳು ಸರಿಯಾದ ಅಸ್ತçದೊಂದಿಗೆ ಸಜ್ಜಾಗುವ ಸಂಭವವಿದೆ. ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಬಲವಾಗಿ ಒಗ್ಗೂಡಿದ್ದು, ಜಂಟಿ ಹೋರಾಟದಲ್ಲಿ ಸರ್ಕಾರವನ್ನು ಮಣಿಸುವ ಹುರುಪಿನಲ್ಲಿವೆ.

 

 

 

 

 

 

Leave a Reply

Your email address will not be published. Required fields are marked *