ಮಂಡ್ಯ: ಕಾಮತೃಷೆಯ ಆಸೆಗಾಗಿ ಯುವಕನ ಹಿಂದೆ ಬಿದ್ದ ಎರಡು ಮಕ್ಕಳ ತಾಯಿಯೊಬ್ಬಳು ಆತನಿಂದಲೇ ಭೀಕರವಾಗಿ ಹತ್ಯೆಯಾದ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನಲ್ಲಿ ನಡೆದಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಪರಿಚಯವಾದ ವಿವಾಹಿತ ಮಹಿಳೆಯನ್ನು ಕೊಲೆಗೈದ ಯುವಕ ಬಳಿಕ ಆಕೆಯ ಶವವನ್ನು ತನ್ನ ಜಮೀನಿನಲ್ಲಿ ಬಚ್ಚಿಟ್ಟಿದ್ದಾನೆ.
ಹಾಸನದ ಹೊಸಕೊಪ್ಪಲಿನ ನಿವಾಸಿ ಪ್ರೀತಿ ಎಂಬ ವಿವಾಹಿತ ಮಹಿಳೆ ಕೊಲೆಯಾದವಳು.ಮಂಡ್ಯ ಜಿಲ್ಲೆಯ ಕೆಆರ್ಪೇಟೆ ತಾಲೂಕಿನ ಕರೋಠಿ ಗ್ರಾಮದ ಪುನೀತ್ ಎಂಬಾತ ಹತ್ಯೆಗೈದ ಆರೋಪಿ.
ಹಾಸನದ ಹೊಸಕೊಪ್ಪಲಿನ ನಿವಾಸಿ ಪ್ರೀತಿಗೆ ಗಂಡ ಮುದ್ದಾದ ಎರಡು ಮಕ್ಕಳಿದ್ದರು. ಗಂಡ ಆಟೋ ಡ್ರೈವರ್ ಅಗಿದ್ದು,ಪ್ರೀತಿ ಗಾರ್ಮೆಂಟ್ಸ್ಗೆ ಕೆಲಸಕ್ಕೆ ಹೋಗುತ್ತಿದ್ದಳು. ಈಕೆ ಯಾವಾಗಲೂ ಫೇಸ್ಬುಕ್ನಲ್ಲಿ ಚಾಟ್ ಮಾಡುವ ಹವ್ಯಾಸ ಸಹ ಇತ್ತು. ಈ ಪ್ರೀತಿ ಕಳೆದ ಗುರುವಾರ ರಾತ್ರಿ ಮಂಡ್ಯ ಜಿಲ್ಲೆಯ ಕೆಆರ್ಪೇಟೆ ತಾಲೂಕಿನ ಕರೋಠಿ ಗ್ರಾಮ ಪುನೀತ್ ಎಂಬ ಯುವಕನಿಗೆ ಫೇಸ್ಬುಕ್ನಲ್ಲಿ ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದಳು. ತನ್ನ ಅಕೌಂಟ್ಗೆ ರಿಕ್ವೆಸ್ಟ್ ಬಂದ ತಕ್ಷಣವೇ ಪುನೀತ್ ಅಕ್ಸೆಪ್ಟ್ ಮಾಡಿದ್ದ.ಇದಾದ ನಂತರ ಪ್ರೀತಿ ಹಾಗೂ ಪುನೀತ್ ನಡುವೆ ಚಾಟಿಂಗ್ ನಡೆದು ಮೊಬೈಲ್ ನಂಬರ್ ಕೂಡ ಎಕ್ಸ್ ಚೆಂಜ್ ಮಾಡಿದ್ದಾಳೆ. ಬಳಿಕ ಒಂದೇ ದಿನದಲ್ಲಿ ಮಾತುಕತೆ ನಡೆದಿದೆ.ನಂತರ ಆಕೆ ಭೇಟಿಯಾಗುವಂತೆ ಪುನೀತ್ ಗೆ ಹೇಳಿದ್ದಾಳೆ. ಆಕೆ ಕರೆದದ್ದೇ ತಡ ಪುನೀತ್ ಭಾನುವಾರ ಬೆಳಗ್ಗೆಯೇ ತನ್ನ ಸ್ನೇಹಿತನ ಕಾರು ತೆಗೆದುಕೊಂಡು ಹಾಸನಕ್ಕೆ ಹೋಗಿದ್ದಾನೆ. ಅತ್ತ ಪ್ರೀತಿ ತನ್ನ ಮನೆಯವರಿಗೆ ಸ್ನೇಹಿತೆಯ ಮಗಳ ಶಾಸ್ತ್ರ ಇದೆ ಎಂದು ಹೋಗುವುದಾಗಿ ಮನೆಯಿಂದ ಬಂದಿದ್ದಾಳೆ. ನಂತರ ಅವಳು ಪುನೀತನ ಕಾರು ಹತ್ತಿ ನನ್ನ ಎಲ್ಲಿಗಾದರೂ ದೂರ ಕರೆದುಕೊಂಡು ಹೋಗು ಲಾಂಗ್ ಡ್ರೈವ್ ಹೋಗಿ ಬರೋಣಾ ಎಂದು ಹೇಳಿದ್ದಾಳೆ. ಅವಳು ಹೇಳಿದನ್ನು ಕೇಳಿ ಪುನೀತ್, ಕೆಆರ್ಎಸ್ ಕಡೆಗೆ ಕಾರನ್ನು ಡ್ರೈವ್ ಮಾಡಿದ್ದಾನೆ. ಬಳಿಕ ಅಲ್ಲಿ ಒಂದು ಲಾಡ್ಜ್ನಲ್ಲಿ ಬುಕ್ ಮಾಡಿಕೊಂಡು ತಮ್ಮ ಕಾಮದ ಬಯಕೆಯನ್ನು ತೀರಿಸಿಕೊಂಡಿದ್ದಾರೆ. ಆಕೆ ಮತ್ತೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಾಳೆ. ಆದರೆ ಪುನೀತ್ ಒಪ್ಪದೇ ಲಾಡ್ಜ್ ನಿಂದ ಇಬ್ಬರು ಬಂದಿದ್ದಾರೆ.
ಲೈಂಗಿಕ ಕ್ರಿಯೆಗೆ ಪೀಡಿಸಿ ಕೊಲೆಯಾದ ಪ್ರೀತಿ
ಇಷ್ಟಕ್ಕೆ ಬಿಡದ ಆಕೆ ವಾಪಸ್ಸು ಹೋಗದೇ ಯಾರು ಇಲ್ಲದ ಸ್ಥಳಕ್ಕೆ ಕರೆದೋಗುವಂತೆ ಒತ್ತಾಯಿಸಿದ್ದಾಳೆ. ಈಗ ಪುನೀತ್ ಕೆ.ಆರ್.ಪೇಟೆಯ ಕತ್ತರಘಟ್ಟ ಅರಣ್ಯ ಪ್ರದೇಶಕ್ಕೆ ಕರೆದೊಯ್ದಿದ್ದ. ಆ ವೇಳೆಯೂ ಸಹ ಪ್ರೀತಿ ಲೈಂಗಿಕ ಕ್ರಿಯೆ ಒತ್ತಾಯಿಸಿದ್ದಾಳೆ.ಆದರೂ ಪುನೀತ್ ಒಪ್ಪಿಲ್ಲ. ಇದಕ್ಕೆ ಪ್ರೀತಿ, ಪುನೀತನಿಗೆ ರೇಗಿಸಿದ್ದಾಳೆ. ಇದರಿಂದ ಕೋಪಗೊಂಡ ಪುನೀತ್ ಆಕೆಗೆ ಕಪಾಳ ಬಾರಿಸಿದ್ದಾನೆ. ಈ ವೇಳೆ ಆಕೆ ಪ್ರಜ್ಞೆ ತಪ್ಪಿದ್ದರಿಂದ ಗಾಬರಿಗೊಂಡು ಕಲ್ಲು ಎತ್ತಿಹಾಕಿ ಆಕೆಯನ್ನು ಬರ್ಬರವಾಗಿ ಹತ್ಯೆಗೈದು,ಮೃತ ದೇಹವನ್ನ ತನ್ನ ತೋಟದಲ್ಲಿ ಹೂತಿದ್ದ. ಈ ಕೃತ್ಯದ ಬಳಿಕ ತಾನೊಬ್ಬ ಕಾರ್ ಡ್ರೈವರ್, ಕಾರಿನಲ್ಲಿ ಮಹಿಳೆಯೊಬ್ಬರು ಮೊಬೈಲ್ ಬಿಟ್ಟು ಹೋಗಿದ್ದಾರೆ ಎಂದು ಪ್ರೀತಿ ಪತಿಗೆ ಕರೆ ಮಾಡಿ ಬಳಿಕ ಮೊಬೈಲ್ ತಲುಪಿಸಿದ್ದಾನೆ. ಈ ವೇಳೆ ಅನುಮಾನಗೊಂಡು ಪ್ರೀತಿ ಪತಿ ಪೊಲೀಸರಿಗೆ ದೂರು ನೀಡಿದ್ದ. ಇತ್ತ ದೂರು ಸ್ವೀಕರಿಸಿದ ಪೊಲೀಸರು ಪುನೀತ್ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೊಲೆ ರಹಸ್ಯ ಬಯಲಾಗಿದೆ.
ಒಟ್ಟಿನಲ್ಲಿ ಸುಂದರ ಸಂಸಾರವಿದ್ದರೂ,ಕಾಮದ ತೆವಲಿಗೆ ಬಲಿಯಾಗಿ ಯುವಕನ ಹಿಂದೆ ಬಿದ್ದವಳು ಬೀದಿ ಹೆಣವಾಗಿದ್ದು ಮಾತ್ರ ದುರಂತ.