Share this news

ಬೆಂಗಳೂರು: ಮುಡಾ ಸೈಟ್ ಹಂಚಿಕೆ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿಯನ್ನು ಕೊಟ್ಟಿದ್ದಾರೆ. ಈ ಮಧ್ಯೆ ಹೈಕೋರ್ಟ್ 10 ದಿನಗಳ ಕಾಲ ಮಧ್ಯಂತರ ತಡೆ ನೀಡಿತ್ತು. ಇದೀಗ ಮಧ್ಯಂತರ ತಡೆ ನಾಳೆ(ಆ.29) ಮುಗಿಯಲಿದ್ದು ಹೈಕೋರ್ಟ್ನಲ್ಲಿ ಮತ್ತೆ ವಿಚಾರಣೆ ನಡೆಯಲಿದೆ. ಪ್ರಾಸಿಕ್ಯೂಷನ್, ಖಾಸಗಿ ದೂರುಗಳಿಗೆ ಮಧ್ಯಂತರ ತಡೆ ನೀಡಿ ಆದೇಶಿಸಿದ್ದ ಕೋರ್ಟ್ ವಿಚಾರಣೆ ನಡೆಸಲಿದ್ದು, ಮುಂದೆ ಏನಾಗಲಿದೆ ಎನ್ನುವುದರ ಬಗ್ಗೆ ಎಲ್ಲರ ಚಿತ್ತ ನೆಟ್ಟಿದೆ.

ಈ ಮಧ್ಯೆ, ರಾಜ್ಯಪಾಲರ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್, ಮತ್ತೊಂದು ಹೋರಾಟಕ್ಕೆ ಸಜ್ಜಾಗಿದೆ. ನಾಳೆ ಹೈಕೋರ್ಟ್ನಲ್ಲಿ ಹೈವೋಲ್ಟೇಜ್ ವಿಚಾರಣೆ ಇದ್ದರೆ, ಇತ್ತ ರಾಜಭವನ ಚಲೋಗೆ ಡಿಸಿಎಂ ಡಿಕೆ ಶಿವಕುಮಾರ್ ಕರೆ ಕೊಟ್ಟಿದ್ದಾರೆ. ಆಗಸ್ಟ್ 31ರಂದು ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ಶಾಸಕರು, ಸಚಿವರು, ಪರಿಷತ್ ಸದಸ್ಯರು, ಸಂಸದರು ಪ್ರತಿಭಟಿಸಲಿದ್ದಾರೆ. ವಿಧಾನಸೌಧ ಬಳಿಯಿರುವ ಮಹಾತ್ಮ ಗಾಂಧಿ ಪ್ರತಿಮೆಯಿಂದ ರಾಜಭವನ ಚಲೋ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧದ ಪ್ರಾಸಿಕ್ಯೂಷನ್ ವಿಚಾರವನ್ನು ಪ್ರಸ್ತಾಸಿರುವ ಡಿಸಿಎಂ ಡಿಕೆ ಶಿವಕುಮಾರ್, ನಮ್ಮ ಬಿಗ್ ಬ್ರದರ್ ಕುಮಾರಸ್ವಾಮಿ ಬಹಳ ಪ್ರಾಮಾಣಿಕರು. ಅವರು ಮಾಡುವುದೆಲ್ಲ ಸಾಚಾ ಕೆಲಸ ಎಂದು ವ್ಯಂಗ್ಯವಾಡಿದ್ದಾರೆ.

 

                        

                          

                        

                          

 

`

Leave a Reply

Your email address will not be published. Required fields are marked *