ಹೆಬ್ರಿ: ಕಾರ್ಕಳ ಮಾಜಿ ಶಾಸಕ, ಕಾಂಗ್ರೆಸ್ ನಾಯಕರಾಗಿದ್ದ ದಿ. ಗೋಪಾಲ ಭಂಡಾರಿ ಅಭಿಮಾನಿ ವೇದಿಕೆಯ ಅಧ್ಯಕ್ಷರಾಗಿ ನೀರೆ ಕೃಷ್ಣ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.
ಹೆಬ್ರಿಯ ಚೈತನ್ಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ಕಾರ್ಯದರ್ಶಿಯಾಗಿ ದೀಪಾ ಭಂಡಾರಿ ಚಾರ, ಕೋಶಾಧಿಕಾರಿಯಾಗಿ ಎಚ್. ಜನಾರ್ಧನ್ ಹೆಬ್ರಿ ಆಯ್ಕೆಯಾಗಿದ್ದಾರೆ.
ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ರಾಜೇಶ್ ಭಂಡಾರಿ ಹುತ್ತುರ್ಕೆ ಚಾರ,ವಾದಿರಾಜ ಶೆಟ್ಟಿ ಚಾರ,ನವೀನ್ ಕೆ ಅಡ್ಯಂತಾಯ, ಸುಕುಮಾರ್ ಮುನಿಯಾಲ್,ಗೋಪಿನಾಥ್ ಭಟ್ ಮುನಿಯಾಲು, ಮೋಹನ್ ದಾಸ್ ನಾಯಕ್ ಶಿವಪುರ,ಜಗದೀಶ್ ಹೆಗ್ಡೆ ಕಡ್ತಲ, ಜಗನ್ನಾಥ ಕುಲಾಲ್ ಶಿವಪುರ, ಬೈಕಾಡಿ ಮಂಜುನಾಥ ರಾವ್,ಪ್ರಕಾಶ್ ಪೂಜಾರಿ ಮಾತಿಬೆಟ್ಟು, ಜಾನ್ ಟೆಲ್ಲಿಸ್ ಅಜೆಕಾರು, ರಾಘವೇಂದ್ರ ನಾಯ್ಕ್ ಆಯ್ಕೆಯಾಗಿದ್ದಾರೆ.