ಬೆಂಗಳೂರು: ಚೀನಾದಲ್ಲಿ ಹೊಸ ವೈರಸ್ ಪತ್ತೆಯಾಗಿರುವುದರಿಂದ ಕರ್ನಾಟಕ ಸೇರಿದಂತೆ ಭಾರತದಾದ್ಯಂತ ಎಚ್ಚರಿಕೆ ವಹಿಸಲಾಗಿದೆ. ಕೇಂದ್ರ ಸರ್ಕಾರ ಐಎಲ್ಐ ಮತ್ತು ಸಾರಿ ಪ್ರಕರಣಗಳಿಗೆ ಪರೀಕ್ಷೆ ನಡೆಸುವಂತೆ ಸೂಚಿಸಿದೆ. ಆರೋಗ್ಯ ಇಲಾಖೆ ಜ್ವರ, ಕೆಮ್ಮು ಇರುವವರು ಮಾಸ್ಕ್ ಧರಿಸುವಂತೆ ಸಲಹೆ ನೀಡಿದೆ. ಆದಾಗ್ಯೂ ಹೊಸ ವೈರಸ್ನಿಂದ ಆತಂಕ ಪಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚಿನಾದಲ್ಲಿ ಹೊಸ ವೈರಸ್ ಆತಂಕ ಸೃಷ್ಟಿಸಿದ್ದು ಕೇಂದ್ರ ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆ ಮಾಡಿದ್ದಾರೆ. ಈ ಬಗ್ಗೆ ಟಿವಿ9ಗೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತಾ ಪ್ರತಿಕ್ರಿಯಿಸಿದ್ದು, ಐಎಲ್ಐ, ಸಾರಿ ಕೇಸ್ಗಳು ಕಂಡುಬAದರೆ ಟೆಸ್ಟಿಂಗ್ ಮಾಡುವಂತೆ ಕರ್ನಾಟಕ ಸೇರಿ ಎಲ್ಲಾ ರಾಜ್ಯಗಳಿಗೆ ಕೇಂದ್ರಸರ್ಕಾರ ಸೂಚನೆ ನೀಡಿದೆ.
ಈ ಸೀಸನ್ನಲ್ಲಿ ವೈರಸ್ ಹೆಚ್ಚಾಗಿ ಬರುತ್ತದೆ. ವೈರಸ್ ಹೆಚ್ಚಾಗುವುದರಿಂದ ಉಸಿರಾಟದ ಸಮಸ್ಯೆ ಆಗುತ್ತೆ. ಜ್ವರ, ಕೆಮ್ಮಿನಿಂದ ಬಳಲುವವರು ಮಾಸ್ಕ್ ಹಾಕುವಂತೆ ಸಲಹೆ ನೀಡಿದ್ದಾರೆ.
ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯದ ಡಾ.ಅತುಲ್ ಗೋಯೆಲ್, ಮೆಟಾಪ್ನ್ಯೂಮೋವೈರಸ್ ಸಾಮಾನ್ಯ ಶೀತವನ್ನು ಉಂಟುಮಾಡುವ ವೈರಸ್. ತುಂಬಾ ವಯಸ್ಸಾದ ಮತ್ತು ಚಿಕ್ಕವರಲ್ಲಿ ಜ್ವರ ಬರಬಹುದು. ಹೊಸ ವೈರಸ್ ಬಗ್ಗೆ ಗಾಬರಿಬೀಳುವ ಅಗತ್ಯವೇನು ಇಲ್ಲ. ಚಳಿಗಾಲದಲ್ಲಿ ಉಸಿರಾಟದ ಸೋಂಕುಗಳು ಸಾಮಾನ್ಯವಾಗಿ ಹೆಚ್ಚಾದರೆ. ನಮ್ಮ ಆಸ್ಪತ್ರೆಗಳು ಅಗತ್ಯವಿರುವ ಹಾಸಿಗೆಗಳೊಂದಿಗೆ ಸಂಪೂರ್ಣ ಸಿದ್ಧವಾಗಿವೆ. ಸಾಮಾನ್ಯ ಮುನ್ನೆಚ್ಚರಿಕೆ ತೆಗೆದುಕೊಳ್ಳುವಂತೆ ನಾನು ವಿನಂತಿಸುತ್ತೇನೆ. ಕೆಮ್ಮು, ನೆಗಡಿ ಇರೋರು ಇತರರೊಂದಿಗೆ ಸಂಪರ್ಕಕ್ಕೆ ಬರದಂತೆ ತಡೆಯಬೇಕು. ಶೀತ ಮತ್ತು ಜ್ವರಕ್ಕೆ ಶಿಫಾರಸು ಮಾಡಲಾದ ಸಾಮಾನ್ಯ ಔಷಧಿ ತೆಗೆದುಕೊಳ್ಳಿ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಗಾಬರಿಪಡಬೇಕಾಗಿಲ್ಲ ಎಂದಿದ್ದಾರೆ.