Share this news

ಕಾರ್ಕಳ: ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 100 ಕ್ಕೂ ಅಧಿಕ ಜನರು ಭಾಗಿಯಾಗಿ ಷಡ್ಯಂತ್ರ ನಡೆಸಿರುವ ಶಂಕೆಯಿದ್ದು,ಈ ಹತ್ಯೆಗೆ ಅಂತಾರಾಜ್ಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಣದ ಫಂಡಿಂಗ್ ನಡೆದಿದೆ. ಜತೆಗೆ ಮಂಗಳೂರಿನ ಪೊಲೀಸ್ ಅಧಿಕಾರಿಗಳು ಶಾಮೀಲಾಗಿದ್ದಾರೆಂಬ ಆರೋಪವಿದೆ ಆದ್ದರಿಂದ ಈ ಪ್ರಕರಣದ ಕುರಿತು ರಾಷ್ಟ್ರೀಯ ತನಿಖಾ ದಳದಿಂಧ (NIA)ತನಿಖೆಯಾಗಬೇಕೆಂದು ಮಾಜಿ ಸಚಿವ ,ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಒತ್ತಾಯಿಸಿದ್ದಾರೆ.

ಸುಹಾಸ್ ಶೆಟ್ಟಿ ಹತ್ಯೆಯ ಸಂದರ್ಭದಲ್ಲಿ ಹಂತಕರಿಗೆ ಸಹಕರಿಸಿದ ಮಹಿಳೆಯರನ್ನು ಇದುವರೆಗೆ ಬಂಧಿಸಿಲ್ಲ.ಸಾಕಷ್ಟು ಪೂರಕ ಸಾಕ್ಷ್ಯಗಳು ಇದ್ದರೂ ಈ ತನಿಖೆ ಸರಿಯಾಗಿ ಸಾಗುತ್ತಿಲ್ಲ ಆದ್ದರಿಂದ ಸತ್ಯಾಸತ್ಯತೆ ಬಹಿರಂಗವಾಗಲು NIA ತನಿಖೆ ಅಗತ್ಯವಿದೆ. ಆದರೆ ರಾಜ್ಯ ಸರ್ಕಾರ ಈ ನಿರ್ಣಯ ತೆಗೆದುಕೊಳ್ಳುತ್ತದೆ ಎಂಬ ನಿರೀಕ್ಷೆ ಇಲ್ಲ‌. ಹೀಗಾಗಿ ರಾಜ್ಯಪಾಲರ ಮಧ್ಯಪ್ರವೇಶಿಸಬೇಕು. ಈ‌ ಹಿನ್ನೆಲೆಯಲ್ಲಿ ಕರಾವಳಿಯ ಉಭಯ‌ ಜಿಲ್ಲೆಗಳ ಶಾಸಕರು ಮೇ 9 ರಂದು ರಾಜ್ಯಪಾಲರನ್ನು ಭೇಟಿ ಮಾಡಿ ಸುಹಾಸ್ ಹತ್ಯೆ ಪ್ರಕರಣವನ್ನು ಎನ್ ಐಎ ತನಿಖೆಗೆ ಒಪ್ಪಿಸುವಂತೆ ಮನವಿ ಮಾಡುವುದಾಗಿ ಸುನಿಲ್ ಕುಮಾರ್ ಹೇಳಿದ್ದಾರೆ.

 

 

 

 

 

 

 

 

 

 

Leave a Reply

Your email address will not be published. Required fields are marked *