ಬೆಂಗಳೂರು: ಈ ಸಾಲಿನ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯಲ್ಲಿ ಕಠಿಣ ರೂಲ್ಸ್ ಗೆ ಶಾಲಾ ಶಿಕ್ಷಣ ಇಲಾಖೆ ಮುಂದಾಗಿದ್ದು, ವೆಬ್ ಕಾಸ್ಟಿಂಗ್ ಹಾಗೂ ಸಿಸಿಟಿವಿ ಮತಷ್ಟು ಕಠಿಣ ಪ್ರಯೋಗಕ್ಕೆ ಇಲಾಖೆ ಮುಂದಾಗಿದೆ. ಕಳೆದ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚುವರಿ ಗ್ರೇಸ್ ಮಾರ್ಕ್ಸ್ ಕೊಟ್ಟು ವಿವಾದಕ್ಕೀಡಾಗಿದ್ದ ಶಿಕ್ಷಣ ಇಲಾಖೆ, ಈ ವರ್ಷ ಗ್ರೇಸ್ ಮಾರ್ಕ್ಸ್ ಕೊಡುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಕಳೆದ ವರ್ಷ ವೆಬ್ಕಾಸ್ಟ್ ಮಾಡುವುದರಿಂದ ಕಡಿಮೆ ಫಲಿತಾಂಶ ಬಂದಿತ್ತು. ಈ ಹಿನ್ನೆಲೆಯಲ್ಲಿ ಹೆಚ್ಚಿನ ಫಲಿತಾಂಶಕ್ಕೆ ಏನು ಮಾಡಬೇಕು ಎಂದು ಚರ್ಚಿಸಿ ಇಲಾಖೆ ಕೆಲಸ ಮಾಡಿದೆ. ಪ್ರತಿ ಜಿಲ್ಲೆಯ ಸಿಇಒಗಳು ಈ ಬಾರಿ ನಮಗೆ ಹೆಚ್ಚು ಸಹಕಾರ ಕೊಟ್ಟಿದ್ದಾರೆ. ಮಕ್ಕಳಿಗೆ ಪರೀಕ್ಷಾ ಸಿದ್ಧತೆಗೆ ನಾವು ಮಾರ್ಗೋಪಾಯಗಳನ್ನ ಸಿದ್ಧ ಮಾಡಿದ್ದೇವೆ ಎಂದರು.
ವಿದ್ಯಾರ್ಥಿಗಳಿಗೆ ಇರುವ ಸಮಸ್ಯೆ ಬಗ್ಗೆ ರಿವ್ಯೂ ಮೀಟಿಂಗ್ ಮಾಡಿದ್ದೇವೆ. ಎಲ್ಲಾ ಜಿಲ್ಲೆಯ ಡಿಸಿ, ಸಿಇಓಗಳ ಜೊತೆ ಚರ್ಚೆ ಮಾಡಿದ್ದೇವೆ. ಈ ಬಾರಿ ಎಸ್ಎಸ್ಎಲ್ಸಿ ಫಲಿತಾಂಶ ಜಾಸ್ತಿ ಆಗಲಿದೆ. ಮಕ್ಕಳಿಗೆ ಒತ್ತಡ ಹಾಕಬಾರದು ಎಂದು ಸೂಚನೆ ನೀಡಿದ್ದೇನೆ. ಕೋವಿಡ್ ಹಿನ್ನೆಲೆಯಲ್ಲಿ ಕೊಟ್ಟಿದ್ದ 10% ಗ್ರೇಸ್ ಅಂಕದ ಬಗ್ಗೆ ಪರಿಶೀಲನೆ ಮಾಡುತ್ತೇವೆ. ಆದರೆ ನಾವು ಕಳೆದ ಬಾರಿ ವೆಬ್ಕಾಸ್ಟಿಂಗ್ ಹಿನ್ನೆಲೆಯಲ್ಲಿ ಕೊಟ್ಟಿದ್ದ 10% ಗ್ರೇಸ್ ಅಂಕ ಈ ಬಾರಿ ನೀಡಲ್ಲ ಎಂದು ಸ್ಪಷ್ಟಪಡಿಸಿದರು.
ಕಳೆದ ಬಾರಿ 10% ಗ್ರೇಸ್ ಅಂಕ ಶಿಕ್ಷಣ ಇಲಾಖೆ ಕೊಟ್ಟಿತ್ತು. ಕೋವಿಡ್ ಹಿನ್ನೆಲೆ ಮೊದಲೇ 10% ಗ್ರೇಸ್ ಅಂಕ ಇತ್ತು. ಅದರ ಜೊತೆಗೆ ಮತ್ತೆ 10% ಗ್ರೇಸ್ ಅಂಕ ಕೊಡಲಾಗಿತ್ತು. ಒಟ್ಟು 20% ಗ್ರೇಸ್ ಅಂಕ ಕೊಟ್ಟಿದ್ದು ಬಾರಿ ವಿವಾದ ಆಗಿತ್ತು. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಕೊಟ್ಟಿದ್ದ 10% ಗ್ರೇಸ್ ಅಂಕ ರದ್ದು ಮಾಡಿದ್ದೇವೆ ಎಂದು ಸಚಿವರು ಹೇಳಿದ್ರು.. ಮಕ್ಕಳು ಸ್ಮಾರ್ಟ್ ಕ್ಲಾಸ್ ಬೇಕು ಎಂದು ಕೇಳ್ತಿದ್ದಾರೆ. ಇಂಟರ್ನೆಟ್ ವ್ಯವಸ್ಥೆ ಬೇಕು ಅಂತ ವಿದ್ಯಾರ್ಥಿಗಳು ಕೇಳಿದ್ದಾರೆ. ಇದರ ವ್ಯವಸ್ಥೆ ಶಿಕ್ಷಣ ಇಲಾಖೆ ಮಾಡಲಿದೆ. ಸ್ಕಿಲ್ ವಿಷಯಗಳನ್ನು ಕಲಿಸುವ ಕಾರ್ಯಕ್ರಮ ಶೀಘ್ರವೇ ಪ್ರಾರಂಭ ಮಾಡಲಿದ್ದೇವೆ ಎಂದರು.