ಬೆಂಗಳೂರು: ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪಾಕ್ನ ಉಗ್ರರ ನೆಲೆಗಳ ಮೇಲೆ ಕ್ಷಿಪಣಿ ದಾಳಿ ಮಾಡಿದೆ. ಭಯೋತ್ಪಾದಕರ 9 ನೆಲೆಗಳನ್ನು ಧ್ವಂಸಗೊಳಿಸುವ ಮೂಲಕ ನವ ವಧುವಿನ ಕುಂಕುಮ ಅಳಿಸಿದ್ದ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದೆ. ಸದ್ಯ ಪ್ರತೀಕಾರ ತೀರಿಸಿಕೊಂಡ ಹಿನ್ನೆಲೆ ಸೋಶಿಯಲ್ ಮೀಡಿಯಾದಲ್ಲಿ ಸಂಭ್ರಮಿಸಲಾಗುತ್ತಿದೆ.ಈ ಹೊತ್ತಲ್ಲೇ ಟ್ವೀಟ್ ಮಾಡುವ ಮೂಲಕ ಶಾಂತಿ ಮಂತ್ರ ಜಪಿಸಿದ್ದ ಕರ್ನಾಟಕ ಕಾಂಗ್ರೆಸ್ ಅನ್ನು ಜನರು ತೀವ್ರ ತರಾಟೆ ತೆಗೆದುಕೊಂಡಿದ್ದಾರೆ. ಆಕ್ರೋಶ ಬೆನ್ನಲ್ಲೇ ಇದೀಗ ಕಾಂಗ್ರೆಸ್ ತನ್ನ ಟ್ವೀಟ್ ಅನ್ನು ಡಿಲೀಟ್ ಮಾಡಿದೆ.
ಭಾರತೀಯ ಸೇನೆಯ ಆರಪೇಷನ್ ಸಿಂಧೂರ್ ಬಳಿಇಕ ರಾಜ್ಯ ಕಾಂಗ್ರೆಸ್ ‘ಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಶಾಂತಿ’ ಎಂದು ಟ್ವೀಟ್ ಮಾಡುವ ಮೂಲಕ ಶಾಂತಿ ಮಂತ್ರ ಜಪಿಸಿತ್ತು. ಆದರೆ ಕೆಲವೇ ಕ್ಷಣದಲ್ಲಿ ಕಾಂಗ್ರೆಸ್ಸಿಗರು ಸೇರಿದಂತೆ ಜನರು ತೀವ್ರ ಕಿಡಿಕಾರಿದ್ದರು. ವ್ಯಾಪಕ ಆಕ್ರೋಶ ಬೆನ್ನಲ್ಲೇ ಕಾಂಗ್ರೆಸ್ ಆ ಟ್ವೀಟ್ನ್ನು ಡಿಲೀಟ್ ಮಾಡಿದೆ. ಬಳಿಕ ಭಾರತೀಯ ಸೇನೆಯನ್ನು ಹೊಗಳುವ ಮೂಲಕ ಮತ್ತೊಂದು ಹೊಸ ಟ್ವೀಟ್ ಮಾಡಿದೆ.
ವಿಶ್ವದ ಬಲಿಷ್ಠ ವಾಯುಪಡೆಗಳಲ್ಲಿ ಒಂದು ಎಂದು ಗುರುತಿಸಿಕೊಂಡಿರುವ ಭಾರತೀಯ ವಾಯುಪಡೆ ಪಾಕ್ ಮೇಲೆ ದಾಳಿ ಮಾಡುವ ಮೂಲಕ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸೂಕ್ತ ಉತ್ತರ ನೀಡಿದೆ. ನಾವು ಸರ್ಕಾರದೊಂದಿಗೆ ಮತ್ತು ಭದ್ರತಾ ಪಡೆÀಯೊಂದಿಗೆ ನಿಲ್ಲುತ್ತೇವೆ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ.
ಇನ್ನು ಪಾಕ್ನ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಟ್ವೀಟ್ ಮಾಡಿದ್ದು, ಭಾರತೀಯ ಸೇನೆಗೆ ಅಭಿನಂದನೆ ಸಲ್ಲಿಸಿದ್ದಾರೆ.