Share this news

ಬೆಂಗಳೂರು, ನ,14 : ಪದ್ಮಶ್ರೀ ಪುರಸ್ಕೃತೆ ಪರಿಸರ ರಾಯಭಾರಿ ಸಾಲುಮರದ ತಿಮ್ಮಕ್ಕ (114)ಅವರು ಶುಕ್ರವಾರ ಮುಂಜಾನೆ ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಸಾಲುಮರದ ತಿಮ್ಮಕ್ಕ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾಲುಮರದ ತಿಮ್ಮಕ್ಕ ಇಂದು ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ಮನೆಯಲ್ಲಿ ತಿಮ್ಮಕ್ಕ ಜಾರಿ ಬಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ಉಸಿರಾಟದ ಸಮಸ್ಯೆಯಿಂದ ತಿಮ್ಮಕ್ಕ ಬಳಲುತ್ತಿದ್ದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *