Share this news

ಕಾರ್ಕಳ: ಕಳೆದ 8 ವರ್ಷಗಳಿಂದ ಮಾನಸಿಕ ಕಾಯಿಲೆ ಹಾಗೂ ರಕ್ತದೊತ್ತಡ ಮತ್ತು ಶುಗರ್ ಕಾಯಿಲೆಯಿಂದ ಬಳಲುತ್ತಿದ್ದ ವಯೋವೃದ್ದೆ ಜೀವನದಲ್ಲಿ ಜಿಗುಪ್ಸೆಗೊಂಡು ನೇಣಿಗೆ ಶರಣಾದ ಘಟನೆ ನಡೆದಿದೆ.
ಕಾರ್ಕಳದ ಪತ್ತೊಂಜಿಕಟ್ಟೆ ನಿವಾಸಿ ಸರೋಜಿನಿ(73) ಆತ್ಮಹತ್ಯೆ ಮಾಡಿಕೊಂಡವರು. ಅವರು ಮಾನಸಿಕ ಕಾಯಿಲೆ ಹಾಗೂ ರಕ್ತದೊತ್ತಡ ಕಾಯಿಲೆಗೆ ಸಾಕಷ್ಟು ಚಿಕಿತ್ಸೆ ಪಡೆದರೂ ಕಾಯಿಲೆ ವಾಸಿಯಾಗದ ಕಾರಣದಿಂದ ನೊಂದು ಸೆ.30 ರಂದು ಸೋಮವಾರ ತಾನು ವಾಸವಿದ್ದ ಮನೆಯ ಹಿಂಬದಿಯ ಶೆಡ್ಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

 

 

Leave a Reply

Your email address will not be published. Required fields are marked *