
ಕಲಬುರಗಿ, ಅ 24 : ನವೆಂಬರ್ 2ರಂದು ಕಲಬುರ್ಗಿಯ ಚಿತ್ತಾಪುರದಲ್ಲಿ ಆರ್ಎಸ್ ಪಥ ಸಂಚಲನ ನಡೆಸಲು ಅನುಮತಿ ಕೋರಿ ಕಲಬುರ್ಗಿ ಹೈಕೋರ್ಟಿಗೆ ಸಲ್ಲಿಕೆಯಾದ ರಿಟ್ ಅರ್ಜಿ ವಿಚಾರಣೆ ಇಂದು ಕಲ್ಬುರ್ಗಿ ಹೈಕೋರ್ಟ್ ಪೀಠದಲ್ಲಿ ನಡೆಯಿತು.
ಜಿಲ್ಲಾಧಿಕಾರಿ ತಮ್ಮ ವರದಿಯಲ್ಲಿ ಎರಡು ಅಭಿಪ್ರಾಯಗಳನ್ನು ನೀಡಿದ್ದಾರೆ ಜನರಿಗೆ ತೊಂದರೆಯಾಗುವ ಬಗ್ಗೆ ಕಲ್ಬುರ್ಗಿ ಎಸ್ ಪಿ ವರದಿ ನೀಡಿದ್ದಾರೆ. ಆರೆಸೆಸ್ಸ್ ಪಥ ಸಂಚಲನದ ಮಾರ್ಗದಲ್ಲಿ ಸಂಚಾರ ದಟ್ಟಣೆ ಆಗುವ ಸಾಧ್ಯತೆ ಇದೆ ಹೀಗಾಗಿ ಯಾವುದೇ ಸಂಘಟನೆಗಳಿಗೂ ಅನುಮತಿ ನೀಡದಂತೆ ಸೂಚನೆಯಿದೆ. ಪಥಸಂಚಲನ ಮಾರ್ಗದಲ್ಲಿ ಹೆಚ್ಚಿನ ಜನರು ಸೇರುವ ಸಾಧ್ಯತೆಯಿದೆೆ. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಯಿದ್ದು, ಆದ್ದರಿಂದ ಪಥಸಂಚಲನ ಕೆಲವು ವಾರಗಳ ಬಳಿಕ ಪಥಸಂಚಲನ ನಡೆಸುವುದು ಸೂಕ್ತ ಎಂದು ವರದಿ ನೀಡಿದೆ. ಈ ಕಾರಣದಿಂದ ನಾವು ಅರ್ಜಿದಾರರ ಮನವಿಯನ್ನು ಬಾಕಿ ಇರಿಸಿದ್ದೇವೆಯೇ ಹೊರತು ತಿರಸ್ಕರಿಸಿಲ್ಲ ಎಂದು ಹೈಕೋರ್ಟಿಗೆ ಅಡ್ವಕೇಟ್ ಜನರಲ್ ಶಶಿಕಿರಣಶೆಟ್ಟಿ ತಿಳಿಸಿದರು.
ಸಮಸ್ಯೆ ಬಗೆಹರಿಯುವ ಮಾರ್ಗದ ಬಗ್ಗೆ ವರದಿಯಲ್ಲಿ ಸ್ಪಷ್ಟತೆ ಇಲ್ಲ. 8 ಬೇರೆ ಸಂಘಟನೆಗಳು ಪಥ ಸಂಚಲನಕ್ಕೆ ಅನುಮತಿ ಕೋರಿದ್ದರು ಪರಿಗಣಿಸಿಲ್ಲ. ಪಥಸಂಚಲನದ ಬಗ್ಗೆ ಒಂದೊAದು ರೀತಿಯ ಹೇಳಿಕೆ ನೀಡಿದ್ದಾರೆ. ಹೀಗಾಗಿ ಎರಡು ವಾರಗಳಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಲು ಕ್ರಮ ಕೈಗೊಳ್ಳುತ್ತೇವೆ ಎಂದು ಶಶಿಕಿರಣಶೆಟ್ಟಿ ತಿಳಿಸಿದರು. ಸರ್ಕಾರದ ವಾದಕ್ಕೆ ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ಆಕ್ಷೇಪ ವ್ಯಕ್ತಪಡಿಸಿದ್ದು, ನವೆಂಬರ್ 2ರಂದು ಪಥಸಂಚಲಕ್ಕೆ ನಾವು ಒಪ್ಪಿದ್ದೆವು. ಈಗ ಪಥಸಂಚಲನಕ್ಕೆ ಅಡ್ಡಿ ಸೃಷ್ಟಿಸಲಾಗುತ್ತಿದೆ. ರಾಜ್ಯ ಸರ್ಕಾರಕ್ಕೆ ಸಾಧ್ಯವಾಗದಿದ್ದರೆ ಭದ್ರತೆಗೆ ಕೇಂದ್ರದ ಪಡೆ ನಿಯೋಜಿಸಲಿ, ಪಥ ಸಂಚಲನ ನಡೆಸುವುದು ಮೂಲಭೂತ ಹಕ್ಕು ಎಂದು ಅರುಣ್ ಶ್ಯಾಮ್ ವಾದಿಸಿದರು.
ಈ ವೇಳೆ ಹೈಕೋರ್ಟ್ ಯಾವಾಗ ತೀರ್ಮಾನ ಕೈಗೊಳ್ಳುತ್ತೀರಿ ಎಂದು ಎ.ಜಿಯವರನ್ನು ಪ್ರಶ್ನಿಸಿದಾಗ ಎರಡು ವಾರಗಳ ಬಳಿಕ ವಿಚಾರಣೆ ನಡೆಸಲು ಎಜಿ ಶಶಿಕಿರಣ್ ಶೆಟ್ಟಿ ತಿಳಿಸಿದರು. ಶಾಂತಿ ಸಭೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದಾಗ ಶಾಂತಿ ಸಮಿತಿ ಸಭೆ ಯಾವತ್ತು ಕರೆಯುತ್ತೀರಿ ಎಂದು ಹೈಕೋರ್ಟ್ ಪ್ರಶ್ನಿಸಿತು. ಅಕ್ಟೋಬರ್ 28 ರಂದು ಶಾಂತಿ ನೆಡೆಸಿ ಅಕ್ಟೋಬರ್ 30 ರಂದು ವರದಿ ಸಲ್ಲಿಸುವಂತೆ ಕೋರ್ಟ್ ಸೂಚಿಸಿದೆ. ನಿಮ್ಮ ಆಡಳಿತ ಸಾಮರ್ಥ್ಯದ ಸಾಬೀತಿಗೆ ಇದು ಸಕಾಲ. ಎಲ್ಲರಿಗೂ ಸಮಾಧಾನ ಆಗುವಂತೆ ಬಗೆಹರಿಸಿ ಎಂದು ಹೈಕೋರ್ಟ್ ಸೂಚನೆ ನೀಡಿತು.
ಒಟ್ಟಿನಲ್ಲಿ ಆರೆಸೆಸ್ಸ್ ಪಥಸಂಚಲನ ಕುರಿತು ಗೊಂದಲ ಸಧ್ಯಕ್ಕೆ ಯಥಾಸ್ಥಿತಿ ಮುಂದುವರಿದಿದ್ದು, ಸರ್ಕಾರದ ವರದಿಯ ಬಳಿಕವೇ ಪಥಸಂಚಲನದ ಭವಿಷ್ಯ ನಿರ್ಧಾರವಾಗುವ ಸಾಧ್ಯತೆಯಿದೆ.






