Share this news

ಕಾರ್ಕಳ: ಮಾನವೀಯತೆಯನ್ನು ಮರೆತು ದುರುಳರು ಸುಮಾರು 5 ಕ್ಕೂ ಮಿಕ್ಕಿ ನಾಯಿಗಳಿಗೆ ವಿಷ ಹಾಕಿ ಹತ್ಯೆಗೈದ ಅಮಾನವೀಯ ಘಟನೆ  ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯ ವಿಷ್ಣುಮೂರ್ತಿ ದೇವಸ್ಥಾನದ ಸಮೀಪ ನಡೆದಿದೆ.
ಯಾರೋ ದುಷ್ಕರ್ಮಿಗಳು ನಾಯಿಗಳಿಗೆ ವಿಷಪ್ರಾಶನ ಮಾಡಿದ ಪರಿಣಾಮ ಜೂ. 6 ರಂದು ಏಕಾಎಕಿ ಸುಮಾರು 5/6 ನಾಯಿಗಳು ಅಸ್ವಸ್ಥಗೊಂಡು ಮೃತಪಟ್ಟಿವೆ.ಈ ವಿಷಯ ತಿಳಿದ ಪ್ರಾಣಿದಯಾ ಸಂಘವು ನಾಯಿಗಳ ಶವದ ಮರಣೋತ್ತರ ಪರೀಕ್ಷೆ ನಡೆಸಿದ್ದು ,ವಿಷಪ್ರಾಶನದಿಂದ ನಾಯಿಗಳು ಸಾವನ್ನಪ್ಪಿರುವುದು ದೃಢಪಟ್ಟಿದೆ.
ಈ ಪ್ರಕರಣದ ಕುರಿತು ಪೇಟಾ ಸಂಸ್ಥೆ ಅಜೆಕಾರು ಪೊಲೀಸರಿಗೆ ದೂರು ನೀಡಿದ್ದು,  ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಾಯಿಗಳನ್ನು ಕ್ರೂರವಾಗಿ ಹತ್ಯೆಗೈದ ದುಷ್ಕರ್ಮಿಗಳ ಕುರಿತು ಮಾಹಿತಿ ನೀಡಿದವರಿಗೆ ಪ್ರಾಣಿದಯಾ‌ ಸಂಘವು 50 ಸಾವಿರ ನಗದು ಬಹುಮಾನ ಘೋಷಣೆ ಮಾಡಿದೆ.ಅಲ್ಲದೇ ಮಾಹಿತಿದಾರದ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದೆ.

 

 

 

 

 

Leave a Reply

Your email address will not be published. Required fields are marked *