ಕಾರ್ಕಳ: ಇಲ್ಲಿನ ಪೆರ್ವಾಜೆ ಪತ್ತೊಂಜಿಕಟ್ಟೆ ಶ್ರೀ ಮಹಾಲಿಂಗೇಶ್ವರ ಯುವಕ ಮಂಡಲದ 2025 -2026ನೇ ಸಾಲಿನ ನೂತನ ಅಧ್ಯಕ್ಷರಾಗಿ ಪ್ರಸಾದ್ ದೇವಾಡಿಗ ಹಾಗೂ ಮಹಿಳಾ ಮಂಡಲದ 2025 -2026ನೇ ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀಮತಿ ರೂಪ ಹರೀಶ್ ಶೆಟ್ಟಿ ಆಯ್ಕೆಯಾಗಿರುತ್ತಾರೆ.
ಯುವಕ ಮಂಡಲ ಉಪಾಧ್ಯಕ್ಷರಾಗಿ ನಿತ್ಯಾನಂದ ಭಂಡಾರಿ, ಕಾರ್ಯದರ್ಶಿ ರಘುನಾಥ ಪೂಜಾರಿ, ಜೊತೆ ಕಾರ್ಯದರ್ಶಿ ನೀಲೇಶ್ ಕೋಟ್ಯಾನ್, ಕೋಶಾಧಿಕಾರಿ ಪ್ರಸನ್ನ ರಾವ್, ಕ್ರೀಡಾ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ರಾಜೇಂದ್ರ ಸಫಲಿಗ ಹಾಗೂ ಲೆಕ್ಕಪರಿಶೋಧಕರಾಗಿ ನವೀನ್ ಎಂ. ಸುವರ್ಣ ಆಯ್ಕೆಯಾಗಿದ್ದಾರೆ. ಗೌರವ ಸಲಹೆಗಾರರಾಗಿ ಕೆ. ಪ್ರಭಾಕರ ಬಂಗೇರ, ಎಂ. ಗಣೇಶ್ ಶೆಟ್ಟಿ,ಹೆನ್ರಿ ಸಾಂತ್ ಮಯೂರ್, ಸದಾನಂದ ಪೈ, ಸದಾಶಿವ ಶೆಟ್ಟಿ ಹಾಗೂ 15 ಮಂದಿ ಸದಸ್ಯರ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.
ಮಹಿಳಾ ಮಂಡಲದ ಉಪಾಧ್ಯಕ್ಷರಾಗಿ ಹೇಮಾ ಸತೀಶ್, ಕಾರ್ಯದರ್ಶಿ ಮಮತಾ ಸುವರ್ಣ, ಜೊತೆ ಕಾರ್ಯದರ್ಶಿ ಸುಜಯ ಮೋಹನ್, ಕೋಶಾದಿಕಾರಿ ಜ್ಯೋತಿ ಗಣೇಶ್ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ವಿಜಯ ಶೆಟ್ಟಿ, ಕ್ರೀಡಾ ಕಾರ್ಯದರ್ಶಿಯಾಗಿ ಅಶ್ವಿನಿ ಶೆಟ್ಟಿ ಆಯ್ಕೆಯಾದರು. 15 ಮಂದಿ ಸದಸ್ಯರ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.