Share this news

 

 

 

ಕಾರ್ಕಳ: ಹೆಬ್ರಿ  ಹಾಗೂ ಕಾರ್ಕಳ  ತಾ.ಪಂ ನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶಶಿಧರ್ ಕೆ ಜಿ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆಗೊಂಡ ಹಿನ್ನಲೆಯಲ್ಲಿ ಕಾರ್ಕಳ ತಾಲೂಕು ಪಂಚಾಯಿತಿಯ ನೂತನ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಉಡುಪಿ ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಪ್ರಶಾಂತ್ ರಾವ್ ಎಂ ವಿ ಅಧಿಕಾರ ಸ್ವೀಕರಿಸಿದರು.
ನೂತನ ತಾ.ಪಂ ಇಒ ಅವರನ್ನು ಕಾರ್ಕಳ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಕೃಷ್ಣಾನಂದ ಸ್ವಾಗತಿಸಿದರು.ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕ ರಮೇಶ್, ವ್ಯವಸ್ಥಾಪಕ ಹರೀಶ್ ಹಾಗೂ ತಾಲೂಕ್ ಪಂಚಾಯತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

 

 

 

 

 

 

 

Leave a Reply

Your email address will not be published. Required fields are marked *