ಮಂಗಳೂರು: ಕಂದಕಕ್ಕೆ ಆಲ್ಟೋ ಕಾರು ಉರುಳಿ ಬಿದ್ದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಪರ್ಲಡ್ಕದಲ್ಲಿ ಇಂದು ಮುಂಜಾನೆ ನಡೆದಿದೆ. ಅಣ್ಣು ನಾಯ್ಕ್, ಚಿದಾನಂದ, ರಮೇಶ್ ನಾಯ್ಕ್ ಮೃತ ದುರ್ದೈವಿಗಳು.
ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿಗಳು ಆಲ್ಟೋ ಕಾರಿನಲ್ಲಿ ಮಕಾರು ಸುಳ್ಯದಿಂದ ಪುತ್ತೂರಿನ ಪುಣಚಕ್ಕೆ ಹೋಗುತ್ತಿದ್ದ ವೇಳೆ ನಸುಕಿನ ಜಾವ 4:15ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಚಾಲಕ ನಿದ್ದೆ ಮಂಪರಿನಲ್ಲಿದ್ದಾಗ ಕಾರು ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿದೆ. ಪುತ್ತೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.