ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ಎನ್ ಐಎ ಅಧಿಕಾರಿಗಳ ತಂಡ ಇಂದು ಮುಂಜಾನೆ ಬಾಂಬ್ ಸ್ಪೋಟದ ಪ್ರಮುಖ ಆರೋಪಿ ಮುಸಾವಿರ್ ನನ್ನು ರಾಮೇಶ್ವರಂ ಕೆಫೆಗೆ ಕರೆತಂದು ಮಹಜರು ನಡೆಸಿದೆ.
ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರ್ ಕೆಫೆಯಲ್ಲಿ ಆರೋಪಿ ಮುಸಾವಿರ್ ನನ್ನ ಕರೆತಂದಿರುವ ಎನ್ ಐಎ ಅಧಿಕಾರಿಗಳು ಸ್ಥಳ ಮಹಜರು ನಡೆಸಿದ್ದಾರೆ.
ಕಳೆದ ಮಾರ್ಚ್ 1ರಂದು ಬಾಂಬ್ ಸ್ಫೋಟಿಸಲಾಗಿತ್ತು. ಬಾಂಬ್ ಇರಿಸಿದ್ದ ತೀರ್ಥಹಳ್ಳಿಯ ಮುಸಾವೀರ್ ಹಾಗೂ ಅಬ್ದುಲ್ ಮಥೀನ್ ಸ್ಪೋಟದ ಬಳಿಕ ನಾಪತ್ತೆಯಾಗಿದ್ದರು. ಆರೋಪಿಗಳ ಬೆನ್ನುಬಿದ್ದ ಎನ್ಐಎ ಅಧಿಕಾರಿಗಳು ಆರೋಪಗಳನ್ನು ಕೊನೆಗೂ ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 12 ರಂದು ಕಾರ್ಯಾಚರಣೆ ನಡೆಸಿ ಬಂಧಿಸಿದ್ದರು. ಇದೀಗ ಆರೋಪಿಯನ್ನು ಕರೆತಂದು ಸ್ಥಳ ಮಹಜರು ನಡೆಸಿ ಆರೋಪಗಳಿಂದ ಮಹತ್ವದ ಮಾಹಿತಿ ಕಲೆ ಹಾಕುತ್ತಿದ್ದಾರೆ
`