ಸಾಗರ: ಖಾಸಗಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಡಿ. 29 ರಂದು ಭಾನುವಾರ ಬೆಳ್ಳಂ ಬೆಳಗ್ಗೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರ ಸಮೀಪದ ಮುರುಘಾ ಮಠ ಬಳಿ ಸಂಭವಿಸಿದೆ.
ಮೃತರನ್ನ ದೊಡ್ಡಬಳ್ಳಾಪುರದ ಮೂಲದವರು ಎನ್ನಲಾಗಿದ್ದು, ಅಕ್ಷಯ್ ಹಾಗೂ ಶರಣ್ ಎಂದು ಗುರುತಿಸಲಾಗಿದೆ.
ಶಿವಮೊಗ್ಗದ ಮಾರ್ಗವಾಗಿ ಹೊನ್ನಾವರಕ್ಕೆ ತೆರಳುತ್ತಿದ್ದ ಎರಟಿಗಾ ಕಾರಿಗೆ ಧರ್ಮಸ್ಥಳಕ್ಕೆ ಹೋಗುವ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿದೆ. ಇವರು ಶಿವಮೊಗ್ಗಕ್ಕೆ ಪ್ರವಾಸಕ್ಕೆಂದು ಬಂದಿದ್ದರು.
ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಪೂರ್ತಿ ಪುಡಿಪುಡಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಆನಂದಪುರ ಠಾಣಾ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ.