ಕಾರ್ಕಳ: ಕಾರ್ಕಳ ತಾಲೂಕಿನ ಸಾಣೂರು ಎಂಬಲ್ಲಿ ವ್ಯಕ್ತಿಯೊಬ್ಬರು ಕೆರೆಯಲ್ಲಿ ಈಜುತ್ತಿದ್ದಾಗ ಉಸಿರುಕಟ್ಟಿ ಮೃತಪಟ್ಟಿದ್ದಾರೆ.
ಸಾಣೂರಿನ ಕೃಷ್ಣಪ್ಪ (55ವ) ಮೃತಪಟ್ಟವರು.
ಅವರು ಲಾರಿಯಲ್ಲಿ ಲೋಡರ್ ಕೆಲಸ ಮಾಡಿಕೊಂಡಿದ್ದು, ನ.02 ರಂದು ಸಾಣೂರು ಗ್ರಾಮ ಮಠದಕೆರೆಯಲ್ಲಿ ಈಜುತ್ತಿರುವಾಗ ಆಕಸ್ಮಿಕವಾಗಿ ಯಾವುದೋ ಕಾರಣದಿಂದ ನೀರಿನಲ್ಲಿ ಮುಳುಗಿ ಉಸಿರು ಕಟ್ಟಿ ಮೃತಪಟ್ಟಿದ್ದಾರೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.































































































