Share this news

ಹುಬ್ಬಳ್ಳಿ: ಸಂಸದ ಹಾಗೂ ಜೆಡಿಎಸ್ ನಾಯಕ ಎಚ್.ಡಿ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಮಹಿಳೆಯರಿಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ಎಫ್ಐಆರ್ ದಾಖಲಾದ ಬೆನ್ನಲ್ಲೇ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕೆಂಬ ಆಗ್ರಹ ಹೆಚ್ಚಾದ ಹಿನ್ನಲೆಯಲ್ಲಿ ಕೊನೆಗೂ ಜೆಡಿಎಸ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಸಮಿತಿ ಬಳಿಕ, ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ವಿರುದ್ಧವೂ ಲೈಂಗಿಕ ಕಿರುಕುಳ ಹಾಗೂ ಕ್ರಿಮಿನಲ್ ಬೆದರಿಕೆ ಆರೋಪದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದರು. ಈಗಾಗಲೇ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೋರ್ ಕಮಿಟಿ ಸಭೆಯಲ್ಲಿ ಇದನ್ನು ಶಿಫಾರಸು ಮಾಡಲಾಗುವುದು. ಪ್ರಜ್ವಲ್ ಅವರು ಸಂಸತ್ ಸದಸ್ಯರಾಗಿರುವುದರಿಂದ, ಅದನ್ನು ದೆಹಲಿಯಿಂದ ಮಾಡಬೇಕಾಗಿದೆ. ಆದ್ದರಿಂದ ದೇವೇಗೌಡರಿಗೆ ಈ ಕುರಿತು ಕ್ರಮಕೈಗೊಳ್ಳಲು ಮನವಿ ಮಾಡಿದ್ದೇನೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

 

 

 

                        

                          

Leave a Reply

Your email address will not be published. Required fields are marked *