ಕಾರ್ಕಳ: ಕಾರ್ಕಳ ತಾಲೂಕಿನ ಬೈಲೂರು ಪ್ರೌಢಶಾಲೆಯ ವಿದ್ಯಾರ್ಥಿ 9ನೇ ತರಗತಿಯ ಶಯನ್ ಡಿ. ಶೆಟ್ಟಿ ಸಾಧಕರತ್ನ ರಾಷ್ಟ್ರೀಯ ಪ್ರಶಸ್ತಿ ಗೆ ಆಯ್ಕೆಯಾಗಿದ್ದಾರೆ.
ಇವರು ಕರಾಟೆ ಮಾಸ್ಟರ್ ಗಳಾದ ಸೋಮನಾಥ ಡಿ. ಸುವರ್ಣ ಮತ್ತು ಡಾ| ವಿಜಯಲಕ್ಷ್ಮಿ ಆರ್ ನಾಯಕ್ ಅವರ ಶಿಷ್ಯರಾಗಿದ್ದು ಪ್ರಸ್ತುತ ಬೈಲೂರು ಮಾರಿಯಮ್ಮ ದೇವಸ್ಥಾನದ ಸಭಾಂಗಣದಲ್ಲಿ ನಡೆಯುತ್ತಿರುವ ಕರಾಟೆ ತರಗತಿ ಯಲ್ಲಿ ಕರಾಟೆ ತರಬೇತಿಯನ್ನು ಪಡೆಯುತ್ತಿದ್ದಾರೆ.
ಬೈಲೂರು ಪ್ರೌಢಶಾಲೆಯ ಮುಖ್ಯ ಶಿಕ್ಷಕ ನಾಗರಾಜ್ ಸರ್ ಹಾಗೂ ಪಿ.ಟಿ ಟೀಚರ್ ಫೆಡ್ರಿಕ್ ರೇಬೆಲ್ಲೊ ಇವರ ಮಾರ್ಗದರ್ಶನದಲ್ಲಿ ಸಂಸ್ಥೆಯ ಪ್ರತಿನಿಧಿಯಾಗಿ ಹಲವು ಕರಾಟೆ ಪಂದ್ಯಾಟದಲ್ಲಿ ಭಾಗವಹಿಸಿ ತಾಲೂಕು, ಜಿಲ್ಲಾ ಹಾಗೂ ರಾಷ್ಟ್ರ ಮಟ್ಟದ ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ.
ಇವರ ಈ ಸಾಧನೆಯನ್ನು ಗುರುತಿಸಿ ನಾಡಿನ ಸಮಾಚಾರ ಸೇವಾ ಸಂಘ (ರಿ.) ಗೋಕಾಕ ಇವರು ಇಂದು ಬೆಳಗಾವಿ ಜಿಲ್ಲೆಯ ಕನ್ನಡ ಭವನದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ನಡೆಯುವ ಸಮಾರಂಭದಲ್ಲಿ ಸಾಧಕರತ್ನ ರಾಷ್ಟ್ರೀಯ ಪ್ರಶಸ್ತಿ ಯನ್ನು ನೀಡಿ ಗೌರವಿಸಿರುತ್ತಾರೆ. ಇವರು ನೀರೆ ಗ್ರಾ.ಪಂಚಾಯತ್ ನ ಮಾಜಿ ಅಧ್ಯಕ್ಷರಾದ ರಮೇಶ್ ಕಲ್ಲೊಟ್ಟೆಯವರ ಸಹೋದರ ಶ್ರೀ ದಿನೇಶ್ ಶೆಟ್ಟಿ ಮತ್ತು ಸುಪ್ರಿಯಾ ಶೆಟ್ಟಿ ದಂಪತಿಗಳ ಪುತ್ರರಾಗಿದ್ದಾರೆ.