ತುಮಕೂರು : ತುಮಕೂರಿನಲ್ಲಿ ದಾವಣಗೆರೆ ಪಿಎಸ್ಐ ನಾಗರಾಜಪ್ಪ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಡೆತಯ್ ನೋಟ್ ನಲ್ಲಿ ಸ್ಪೋಟಕ ಸಂಗತಿ ಬಯಲಾಗಿದೆ. ಮಗನ ಭವಿಷ್ಯದ ಕುರಿತು ಮನನೊಂದು ನಾಗರಾಜಪ್ಪ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನುವ ಅಂಶ ತುಮಕೂರು ನಗರ ಪೊಲೀಸರ ತನಿಖೆಯ ವೇಳೆ ಹೊರಬಿದ್ದಿದೆ.
ನಾಗರಾಜಯ್ಯ ಸಾವಿನ ಕಾರಣದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದರು. ಕರ್ತವ್ಯಕ್ಕೆ ಹೊರಡುವ ಮುನ್ನ ಮನೆಯಲ್ಲಿ ಕುಟುಂಬದ ಜತೆ ಜಗಳವಾಗಿದ್ದು, ಇಂಜಿನಿಯರ್ ಮುಗಿಸಿದ್ದ ಮಗ ಮನೆಯಲ್ಲಿ ಇದ್ದಿದ್ದಕ್ಕೆ ನಾಗರಾಜಪ್ಪ ತೀವ್ರ ಬೇಸರಗೊಂಡಿದ್ದರು. ಆತನ ಭವಿಷ್ಯದ ವಿಚಾರದಲ್ಲಿ ನೊಂದು ನಾಗರಾಜಪ್ಪ ಮನನೊಂದು ದಾವಣಗೆರೆಯಿಂದ ತುಮಕೂರಿಗೆ ಬಂದು ಲಾಡ್ಜ್ ನಲ್ಲಿ ನಾಗರಾಜಪ್ಪ ನೇಣಿಗೆ ಶರಣಾಗಿದ್ದಾರೆ ಎಂದು ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ.
ಡೆತ್ ನೋಟಿನಲ್ಲಿ ತಾನು ಮಗನ ವಿಚಾರವಾಗಿ ಬೇಸರಗೊಂಡು ನಾನು ಆತ್ಮಹತ್ಯೆ ಮಾಡಿ ಕೊಳ್ಳುತ್ತಿದ್ದೇನೆ. ನನ್ನ ಮಗನಿಗೆ ಕೆಲಸ ಸಿಗಲಿ ಎಂಬ ಉದ್ದೇಶದಿಂದ ಆತ್ಮಹತ್ಯೆಗೆ ಶರಣಾಗಿದ್ದೇನೆ ಎಂದು ನಾಗರಾಜಪ್ಪ ಉಲ್ಲೇಖಿಸಿದ್ದಾರೆ. ಈ ಪ್ರಕರಣವನ್ನು ದಾವಣಗೆರೆಯ ಕೆಟಿe ನಗರ ಠಾಣೆಗೆ ವರ್ಗಾಯಿಸಲಾಗುತ್ತಿದ್ದು, ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ ಎಂದು ತಿಳಿದು ಬಂದಿದೆ.