Share this news

ಕಾರ್ಕಳ; ಯುವತಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಎ1 ಆರೋಪಿ ಅಲ್ತಾಫ್ ಎಂಬಾತನಿಗೆ ಡ್ರಗ್ಸ್ ಪೂರೈಕೆ ಮಾಡಿದ ಆರೋಪದಲ್ಲಿ ಬಂಧಿತನಾಗಿರುವ ಅಭಯ್ ಎಂಬಾತನ ಬದಲಿಗೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತ ಅರವಿಂದ್ ಎಂಬವರ ಫೋಟೋ ಹಾಕಿ ಅಪಪ್ರಚಾರ ಮಾಡಲಾಗುತ್ತಿದ್ದು ಈ ಕುರಿತು ಜಾಗರಣ ವೇದಿಕೆಯ ಕಾರ್ಯಕರ್ತ ಅರವಿಂದ್ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ಹಿಂದೂ ಯುವತಿ ಅತ್ಯಾಚಾರ ಖಂಡಿಸಿ ಹಿಂದೂಪರ ಸಂಘಟನೆಗಳು ಆ.26ರಂದು ಪ್ರತಿಭಟನಾ ಮೆರವಣಿಗೆ ನಡೆಸಿದ್ದರು. ಈ ಮೆರವಣಿಗೆಯಲ್ಲಿ ಸಂಘಟನೆ ಕಾರ್ಯಕರ್ತ ಅರವಿಂದ ಎಂಬವರು ಭಾಗಿಯಾಗಿದ್ದರು. ಕೆಲವು ವಿರೋಧಿಗಳು ಇವರನ್ನೇ ಅಭಯ್ ಎಂದು ಬಿಂಬಿಸಿ ಸುಳ್ಳು ಪೋಸ್ಟ್ ಸೃಷ್ಟಿಸಿ ಅದನ್ನು
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿ ಅಪಪ್ರಚಾರ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಅರವಿಂದ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ

                        

                          

                        

                          

 

`

Leave a Reply

Your email address will not be published. Required fields are marked *