Share this news

ಬೆಂಗಳೂರು : ಆರ್‌ಸಿಬಿ ಮೊದಲ ಬಾರಿ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದ್ದು, ಈ ಹಿನ್ನೆಲೆಯಲ್ಲಿ ಕಳೆದ ಜೂನ್ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮ ವೀಕ್ಷಿಸಲು ಆರ್‌ಸಿಬಿ ಅಭಿಮಾನಿಗಳು ಬಂದ ವೇಳೆ ಕಾಲ್ತುಳಿತ ಸಂಭವಿಸಿ 11 ಜನ ಸಾವನ್ನಪ್ಪಿದ್ದರು.ಈ ಪ್ರಕರಣಕ್ಕೆ ಸಂಬAಧಪಟ್ಟAತೆ ಬೆಂಗಳೂರು ಕಮಿಷನರ್ ಬಿ ದಯಾನಂದ ಸೇರಿದಂತೆ ಹಲವು ಅಧಿಕಾರಿಗಳನ್ನು, ಸಸ್ಪೆಂಡ್ ಮಾಡಲಾಗಿತ್ತು. ಇದೀಗ ಅಮಾನತುಕೊಂಡಿರುವ ಬೆಂಗಳೂರು ಕಮಿಷನರ್ ಬಿ.ದಯಾನಂದ್ ವಿಚಾರಣೆಗೆ ಹಾಜರಾಗಿದ್ದಾಗ, ಉಚಿತ ಟಿಕೆಟ್ ಎಂದು ಘೋಷಣೆ ಮಾಡಿದ್ದರಿಂದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿತು ಎಂದು ತಿಳಿಸಿದ್ದಾರೆ.

ಮ್ಯಾಜಿಸ್ಟ್ರೇಟ್ ಮುಂದೆ ಗುರುವಾರ ವಿಚಾರಣೆಗೆ ಹಾಜರಾದ ದಯಾನಂದ್ ಅವರು ಅಂದು ನಡೆದ ಘಟನೆಯನ್ನು ಸಂಪೂರ್ಣವಾಗಿ ವಿವರಿಸಿದ್ದಾರೆ. ಘಟನೆ ನಡೆದ ದಿನ 21 ಗೇಟ್‌ಗಳಿಗೂ ನಾನೇ ಖುದ್ದಾಗಿ ಭೇಟಿ ನೀಡಿದ್ದೆ. ಸಂಪೂರ್ಣವಾಗಿ ಬಂದೋಬಸ್ತ್ ಮಾಡಿಕೊಳ್ಳಲಾಗಿತ್ತು.ಪ್ರತಿ ಬಾರಿ ಐಪಿಎಲ್ ಮ್ಯಾಚ್ ನಡೆಯುವಾಗ ಇರುವಷ್ಟು ಬಂದೋಬಸ್ತ್ ಮಾಡಿಕೊಳ್ಳಲಾಗಿತ್ತು. ಆದರೆ ಅಂದು ಗೇಟ್ ತೆಗೆಯಲು ತಡಮಾಡಿದ್ದರು. ಉಚಿತ ಟಿಕೆಟ್ ಎಂದು ಘೋಷಣೆ ಮಾಡಿದ್ದರಿಂದ ಇಷ್ಟೆಲ್ಲ ಅವಾಂತರ ನಡೆದಿದೆ ಎಂದು ಹೇಳಿಕೆ ದಾಖಲಿಸಿದ್ದಾರೆ.

ಆರ್‌ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತಕ್ಕೆ ಬಲಿಯಾದ 11 ಜನರ ಸಾವಿನ ತನಿಖೆ ಅಂತಿಮ ಹಂತಕ್ಕೆ ಬಂದಿದೆ. ಇಂದು ಇಡೀ ದಿನ ಓಪನ್ ಡೇ ವಿಚಾರಣೆ ನಡೆಯಲಿದ್ದು ತನಿಖೆ ಕೊನೆಯ ಭಾಗವಾಗಿ ಸಾರ್ವಜನಿಕರು ಭಾಗಿಯಾಗಲಿದ್ದಾರೆ. ಕಾಲ್ತುಳಿತ ಸಂಬAಧ ಈವರೆಗೆ 140 ಮಂದಿ ಸಾಕ್ಷಿಗಳ ಹೇಳಿಕೆ ದಾಖಲಿಸಲಾಗಿದ್ದು ಮುಂದಿನ ವಾರ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

 

 

Leave a Reply

Your email address will not be published. Required fields are marked *