ಬೆಂಗಳೂರು: ಸಾಮಾನ್ಯವಾಗಿ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿದಾಗ ಅಲ್ಲಿಂದ ದೇವರ ಪ್ರಸಾದವನ್ನು ಖರೀದಿಸಿ, ಬಂಧು-ಬಳಗ ಹಾಗೂ ನೆರೆಹೊರೆಯವರಿಗೆ ವಿತರಿಸುವುದು ಬಹಳ ಹಿಂದಿನಿAದಲೂ ನಡೆದುಕೊಂಡು ಬಂದಿದೆ. ಅಲ್ಲದೇ ದೂರದ ದೇವಸ್ಥಾನಗಳಿಗೆ ಬೇರೆಯವರು ಹೋಗುವವರಿದ್ದರೆ ಅವರ ಬಳಿ ಪ್ರಸಾದ ತರಿಸುವುದೂ ಇದೆ. ಆದರೆ ಇದೀಗ ಕರ್ನಾಟಕದ 14 ಪ್ರಮುಖ ದೇವಸ್ಥಾನಗಳ ಪ್ರಸಾದ ವನ್ನು ಭಕ್ತರಿಗೆ ಆನ್ಲೈನ್ ಮೂಲಕ ವಿತರಿಸುವ ಇ ಪ್ರಸಾದ ವ್ಯವಸ್ಥೆಗೆ ಚಾಲನೆ ದೊರೆತಿದ್ದು, ಇನ್ನುಮುಂದೆ ದೇವರ ಪ್ರಸಾದವು ನಿಮ್ಮ ಬಾಗಿಲಿಗೇ ಬರಲಿದೆ. ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ಮೂಕಾಂಬಿಕಾ ದೇಗುಲ ಸೇರಿದಂತೆ ಒಟ್ಟು 14 ದೇಗುಲಗಳ ಪ್ರಸಾದ ಆನ್ಲೈನ್ ಮೂಲಕ ಸಿಗಲಿದೆ.
ಮುಜರಾಯಿ ಇಲಾಖೆಯ ಅಧೀನದಲ್ಲಿ ಬರುವ ದೇಗುಲಗಳ ಪ್ರಸಾದ ಆನ್ಲೈನ್ ಮೂಲಕ ವಿತರಿಸುವ ‘ಇ-ಪ್ರಸಾದ ಕಾರ್ಯಕ್ರಮಕ್ಕೆ ಗುರುವಾರ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ. ಪ್ರಾಯೋಗಿಕವಾಗಿ ರಾಜ್ಯದ 14 ಪ್ರಮುಖ ದೇವಾಲಯಗಳ ಪ್ರಸಾದವನ್ನು ಆನ್ಲೈನ್ ಮೂಲಕ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಕಲ್ಲು ಸಕ್ಕರೆ, ಬಾದಾಮಿ, ಗೋಡಂಬಿ, ದ್ರಾಕ್ಷಿ,ಭಸ್ಮ,ಬಿಲ್ವಪತ್ರೆ, ಕುಂಕುಮ, ಹೂವು ಸೇರಿದಂತೆ ಆಯಾ ದೇವಸ್ಥಾನಗಳ ಪ್ರಮುಖ ಪ್ರಸಾದವನ್ನು ಭಕ್ತರು ತರಿಸಿಕೊಳ್ಳಬಹುದಾಗಿದೆ.ಇತ್ತೀಚಿನ ದಿನಗಳಲ್ಲಿ ದೂರದ ದೇವಸ್ಥಾನಗಳಿಗೆ ಹೋಗಿ, ಜನರ ದಟ್ಟಣೆಯ ನಡುವೆ ದೇವರ ದರ್ಶನ ಪಡೆಯುವುದು ಕಷ್ಟ. ಈ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ತೆರಳಿ ಪ್ರಸಾದ ಪಡೆಯಲು ಕಷ್ಟವಾಗುವ ಕಾರಣ ಭಕ್ತರ ಅನುಕೂಲಕ್ಕಾಗಿ ಮುಜರಾಯಿ ಇಲಾಖೆ ಹೊಸ ಪ್ರಯೋಗ ನಡೆಸಿದೆ.
ಪ್ರಸಾದವನ್ನು ತರಿಸಿಕೊಳ್ಳಲು ಇಚ್ಛಿಸುವ ಭಕ್ತರು ಮುಜರಾಯಿ ಇಲಾಖೆಯ ಅಧಿಕೃತ ವೆಬ್ಸೈಟ್ csc.devalayas.com ಕ್ಲಿಕ್ ಮಾಡಿ. ಅಲ್ಲಿ ಬಲಭಾಗದಲ್ಲಿ ಮೇಲ್ಗಡೆ ಇರುವ Login With Digital Seva connect ಆಯ್ಕೆಯನ್ನು ಕ್ಲಿಕ್ ಮಾಡಬೇಕು. ನಂತರ ಯೂಸರ್ನೇಮ್ ಅಥವಾ ಇ ಮೇಲ್ ನಮೂದಿಸಿ ಪಾಸ್ವರ್ಡ್ ನಮೂದಿಸಬೇಕು. ಒಂದು ವೇಳೆ ಡಿಜಿಟಲ್ ಸೇವಾ ಕನೆಕ್ಟ್ಗೆ ಈವರೆಗೆ ನೋಂದಾಯಿಸಿಕೊಂಡಿಲ್ಲದೇ ಇದ್ದಲ್ಲಿ ರಿಜಿಸ್ಟರ್ ಮಾಡಿಕೊಳ್ಳುವ ಮೂಲಕ ಲಾಗಿನ್ ಕ್ರೆಡೆನ್ಶಿಯಲ್ಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಪೋರ್ಟಲ್ಗೆ ಲಾಗಿನ್ ಆದ ನಂತರ ನಮಗೆ ಬೇಕಾದ ದೇಗುಲವನ್ನು ಆಯ್ಕೆ ಮಾಡಿ ಪ್ರಸಾದವನ್ನು ಆಯ್ಕೆ ಮಾಡಬೇಕು. ಪಾವತಿ ಮಾಡಿದ ನಂತರ ಕಾರ್ಟ್ನಲ್ಲಿ ನಿಮ್ಮ ಆರ್ಡರ್ ಡಿಸ್ಪ್ಲೇ ಆಗುತ್ತದೆ.
K