Share this news

ನವದೆಹಲಿ: ಭಾರತದ ಅಮಾಯಕ 28 ಪ್ರವಾಸಿಗರನ್ನು ಭೀಕರವಾಗಿ‌ ಹತ್ಯೆಗೈದ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಮಂಗಳವಾರ ತಡರಾತ್ರಿ ಏಕಾಎಕಿ ಬಾಂಬ್ ದಾಳಿ ನಡೆಸಿ ಪ್ರತೀಕಾರ ತೀರಿಸಿಕೊಂಡಿದೆ.

ಬುಧವಾರ ಮುಂಜಾನೆಯಿಂದ ದೇಶಾದ್ಯಂತ ಯುದ್ಧ ಸಿದ್ಧತೆ ಅಣಕು ಕಾರ್ಯಾಚರಣೆ ನಡೆಸುವ ಮುನ್ನವೇ ಉಗ್ರರ ಮೇಲೆ ನಮ್ಮ ವಾಯುಸೇನೆ ರಣಭೀಕರ ದಾಳಿ ನಡೆಸಿ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದೆ. ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಉಸ್ತುವಾರಿಯಲ್ಲಿ ಪ್ರತಿಕಾರದ ದಾಳಿ ನಡೆಸಲಾಗಿದೆ. ಪಾಕಿಸ್ತಾನದ ಹಿಡಿತದಲ್ಲಿರುವ ಪಿಒಕೆಯ 9 ಸ್ಥಳಗಳನ್ನು ಗುರಿಯಾಗಿಸಿದ ಭಾರತೀಯ ವಾಯುಸೇನೆ 20 ಕ್ಕೂ ಅಧಿಕ ಬಾಂಬ್ ದಾಳಿ ಮಾಡಿದೆ.ಇದನ್ನು ಪಾಕಿಸ್ತಾನಿ ಮಿಲಿಟರಿ ವಕ್ತಾರರು ದೃಢಪಡಿಸಿದ್ದಾರೆ. ಈ ದಾಳಿಯಲ್ಲಿ ಜೈಶ್-ಎ- ಮೊಹಮ್ಮದ್ ಹಾಗೂ ಲಷ್ಕರ್ ಎ ತೊಯ್ಬಾ ಉಗ್ರ ಸಂಘಟನೆಯ ಸುಮಾರು 50ಕ್ಕೂ ಅಧಿಕ ಉಗ್ರರು ಸಾವನ್ನಪ್ಪಿ
ಅನೇಕ ಭಯೋತ್ಪಾದಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಮಂಗಳವಾರ ಮಧ್ಯರಾತ್ರಿಯ ನಂತರ ಮುಜಫರಾಬಾದ್ ನಗರದ ಸುತ್ತಮುತ್ತಲಿನ ಪರ್ವತಗಳ ಬಳಿ ಪಾಕಿಸ್ತಾನಿ ಆಕ್ರತಮಿತ ಕಾಶ್ಮೀರ ಪ್ರದೇಶದಲ್ಲಿ ಹಲವಾರು ದೊಡ್ಡ ಸ್ಫೋಟಗಳು ಕೇಳಿಬಂದವು ಎಂದು ಹಲವಾರು ಸ್ಥಳೀಯರು ತಿಳಿಸಿದ್ದಾರೆ. ಸ್ಫೋಟಗಳ ನಂತರ ನಗರದಲ್ಲಿ ವಿದ್ಯುತ್ ಕಡಿತಗೊಂಡಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಇದೇ ಕಾರಣಕ್ಕೆ ಮಧ್ಯರಾತ್ರಿ ಪಾಕಿಸ್ತಾನದ ಬೀದಿಗಳಲ್ಲಿ ಭಾರಿ ಜನಸಮೂಹ ಸೇರಿದೆ.

ಜೈಷ್ ಎ ಮೊಹಮ್ಮದ್, ಲಷ್ಕರ್ ನೆಲೆಗಳ ಮೇಲೆ ದಾಳಿವಜೈಷ್-ಎ-ಮೊಹಮ್ಮದ್ ಮತ್ತು ಲಷ್ಕರ್-ಎ-ತೊಯ್ಬಾ ನೆಲೆಗಳನ್ನು ಪ್ರಮುಖವಾಗಿ ಗುರಿಯಾಗಿಸಿ ಭಾರತೀಯ ಸೇನೆ ದಾಳಿ ನಡೆಸಿದೆ. ಭಯೋತ್ಪಾದಕರ ಅನೇಕ ಅಡಗುತಾಣಗಳು ನಾಶವಾಗಿವೆ. ಪಹಲ್ಗಾಮ್ ದಾಳಿಯ ನಂತರ, ಪಾಕಿಸ್ತಾನವು ಪಿಒಕೆಯಲ್ಲಿ ತನ್ನ ಸೇನಾ ಜಮಾವಣೆ ಹೆಚ್ಚಿಸಲು ಪ್ರಾರಂಭಿಸಿತ್ತು. ದಾಳಿಯ ಭಯದಿಂದಾಗಿ, ಸುಮಾರು 1 ಸಾವಿರ ಹೋಟೆಲ್‌ಗಳು ಮತ್ತು ಮದರಸಾಗಳನ್ನು ಇಲ್ಲಿ ಮುಚ್ಚಲಾಗಿತ್ತು.ಮಸೀದಿಗಳಲ್ಲಿ ಅಜಾನ್ ಕೂಡ ಲೌಡ್ ಸ್ಪೀಕರ್ ಇಲ್ಲದೇ ಮಾಡಲಾಗುತ್ತಿತ್ತು.
ಪಾಕಿಸ್ತಾನಿ ಮಸೀದಿಗಳಿಂದ ಪ್ರಕಟಣೆ ಭಾರತವು ಪಾಕಿಸ್ತಾನದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ಮಾಡಿದ ನಂತರ ಪಾಕಿಸ್ತಾನದ ಮಸೀದಿಗಳಲ್ಲಿ ಎಚ್ಚರಿಕೆಯ ಸಂದೇಶ ಘೋಷಿಸಲಾಗಿದೆ.

 

 

 

 

 

 

 

 

 

 

Leave a Reply

Your email address will not be published. Required fields are marked *