ಹೆಬ್ರಿ: ಆರ್ಸಿಬಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ತೆರಳಿದ್ದ ಉಡುಪಿ ಜಿಲ್ಲೆಯ ಹೆಬ್ರಿ ಮೂಲದ ಚಿನ್ಮಯಿ ಶೆಟ್ಟಿಯವರು ಭೀಕರ ಕಾಲ್ತುಳಿತದಿಂದ ಮೃತಪಟ್ಟಿದ್ದರು. ಈ ದುರಂತದಿAದ ಮೃತಪಟ್ಟ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ 25 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿತ್ತು. ಈ ಹಿನ್ನಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಮೃತಪಟ್ಟ ಚಿನ್ಮಯಿ ಶೆಟ್ಟಿಯವರ ಮನೆಯಾದ ಹೆಬ್ರಿಯ ಚಾರ ಗ್ರಾಮದ ಮದಗದಮನೆಗೆ ತೆರಳಿ ಮೃತರ ಕುಟುಂಬಕ್ಕೆ 25 ಲಕ್ಷ ಮೊತ್ತದ ಪರಿಹಾರದ ಚೆಕ್ ವಿತರಿಸಿ ಸಾಂತ್ವಾನ ಹೇಳಿದರು. ಚಿನ್ಮಯಿ ಶೆಟ್ಟಿಯವರ ತಂದೆ ಕರುಣಾಕರ ಶೆಟ್ಟಿ ಚೆಕ್ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಎಸ್ಪಿ ಹರಿರಾಂ ಶಂಕರ್ ಉಪಸ್ಥಿತರಿದ್ದರು.