Share this news

ಕಾರ್ಕಳ: ಶೃಂಗೇರಿ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಟಿಪ್ಪರ್ ಲಾರಿ ಹಾಗೂ ಬಜಗೋಳಿ ಕಡೆಯಿಂದ ಶೃಂಗೇರಿ ಕಡೆಗೆ ಹೋಗುತ್ತಿದ್ದ ಮಿನಿ ಬಸ್ ನಡುವೆ ಮಾಳ ಘಾಟಿಯಲ್ಲಿ ಅಪಘಾತ ಸಂಭವಿಸಿದ್ದು, ಈ ಘಟನೆಗೆ ಟಿಪ್ಪರ್ ಬಾಲಕನ ಅಜಾಗರೂಕತೆ ಕಾರಣವೆಂದು ಆರೋಪಿಸಿ ಮಿನಿ ಬಸ್ಸಿನಲ್ಲಿದ್ದ ಪ್ರಯಾಣಿಕರ ತಂಡ ಟಿಪ್ಪರ್ ಚಾಲಕನಿಗೆ ಅವಾಚ್ಯವಾಗಿ ನಿಂದಿಸಿ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದಾರೆ.
ಸೋಮವಾರ ಸಂಜೆ ಈ ಅಪಘಾತ ಸಂಭವಿಸಿದ್ದು, ಟಿಪ್ಪರ್ ಚಾಲಕ ಮೂಡಿಗೆರೆಯ ಶಿವು ಜಿ.ಎಸ್ ಹಲ್ಲೆಗೊಳಗಾದ ವ್ಯಕ್ತಿ. ಈ ಕುರಿತು ಮಿನಿ ಬಸ್ಸಿನಲ್ಲಿದ್ದ 8 ಪ್ರಯಾಣಿಕರ ವಿರುದ್ಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಳ ಘಾಟಿಯ ಕಡಿದಾದ ತಿರುವುಗಳಿಂದ ಕೂಡಿದ ರಸ್ತೆಯಲ್ಲಿ ಪದೇಪದೇ ಅಪಘಾತ ಸಂಭವಿಸುತ್ತಿದ್ದು, ಬಹುತೇಕ ಅಪಘಾತಗಳು ಚಾಲಕರ ವೇಗ ಹಾಗೂ ಅಜಾಗರೂಕತೆಯಿಂದ ಸಂಭವಿಸುತ್ತವೆ. ಎಚ್ಚರಿಕೆಯಿಂದ ವಾಹನ ಚಲಾಯಿಸಿದರೆ ಇಂತಹ ಅಪಘಾತಗಳಿಗೆ ಕಡಿವಾಣ ಹಾಕಬಹುದು.

 

 

 

 

 

 

 

 

                        

                          

 

Leave a Reply

Your email address will not be published. Required fields are marked *