Share this news

 

 

 

ಬೆಂಗಳೂರು: ನಾಲ್ವರು ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಗಳು ಸೇರಿದಂತೆ ತೆಲಂಗಾಣ, ಆಂಧ್ರಪ್ರದೇಶ ಬೇರೆ ಬೇರೆ ರಾಜ್ಯದ ಒಟ್ಟು ಏಳು ಹೈಕೋರ್ಟ್ ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಲಾಗಿದೆ. ಸುಪ್ರೀಂಕೋರ್ಟ್  ಕೊಲಿಜಿಯಂನಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸು ಹಿನ್ನಲೆ ವರ್ಗಾವಣೆ  ಮಾಡಿ ಸೋಮವಾರ ಆದೇಶ ಹೊರಡಿಸಲಾಗಿದೆ. ಹೈಕೋರ್ಟ್‌ ಆಡಳಿತದ ಗುಣಮಟ್ಟವನ್ನು ಬಲಪಡಿಸುವ ಉದ್ದೇಶಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ವರದಿಯಾಗಿದೆ.

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅಧ್ಯಕ್ಷತೆಯಲ್ಲಿ ಏಪ್ರಿಲ್ 15 ಮತ್ತು 19 ರಂದು ನಡೆದ ಸಭೆಗಳಲ್ಲಿ ನ್ಯಾಯಾಲಯಗಳ ನ್ಯಾಯಾಧೀಶರ ವರ್ಗಾವಣೆಗೆ ಶಿಫಾರಸ್ಸು ಮಾಡಲಾಗಿತ್ತು. ನ್ಯಾಯಮೂರ್ತಿ ಸಂಜೀವ್ ಖನ್ನಾ ಹೇಳಿಕೆ ಅನುಸಾರ, ಹೈಕೋರ್ಟ್ ಆಡಳಿತ ವ್ಯವಸ್ಥೆ ಗುಣಮಟ್ಟವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ವರ್ಗಾವಣೆ ಮಾಡಲಾಗಿದೆ ಎನ್ನಲಾಗಿದೆ.

ನ್ಯಾ. ಹೇಮಂತ್ ಚಂದನ ಗೌಡರ್ ಅವರನ್ನು ಕರ್ನಾಟಕ ಹೈಕೋರ್ಟ್‌ನಿಂದ ಮದ್ರಾಸ್ ಹೈಕೋರ್ಟ್‌ಗೆ, ನ್ಯಾ.ಕೃಷ್ಣನ್ ನಟರಾಜನ ಅವರನ್ನು ಕರ್ನಾಟಕ ಹೈಕೋರ್ಟ್‌ನಿಂದ ಕೇರಳ ಹೈಕೋರ್ಟ್‌ಗೆ, ನ್ಯಾ. ಎನ್. ಶ್ರೀನಿವಾಸ ಸಂಜಯ್ ಗೌಡ ಅವರನ್ನು ಕರ್ನಾಟಕ ಹೈಕೋರ್ಟ್‌ನಿಂದ ಗುಜರಾತ್ ಹೈಕೋರ್ಟ್‌ಗೆ, ನ್ಯಾ.ಕೃಷ್ಣ ದೀಕ್ಷಿತ್ ಅವರನ್ನು ಕರ್ನಾಟಕ ಹೈಕೋರ್ಟ್‌ನಿಂದ ಒಡಿಶಾ ಹೈಕೋರ್ಟ್‌ಗೆ, ನ್ಯಾ.ಪೆರುಗು ಶ್ರೀಸುಧ ಅವರನ್ನು ತೆಲಂಗಾಣ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ಗೆ, ನ್ಯಾ.ಕೆ.ಸುರೇಂದರ್ ಅವರನ್ನು ತೆಲಂಗಾಣ ಹೈಕೋರ್ಟ್‌ನಿಂದ ಮದ್ರಾಸ್ ಹೈಕೋರ್ಟ್‌ಗೆ ಮತ್ತು ನ್ಯಾ.ಡಾ.ಕೆ.ಮನ್ಮಧ ರಾವ್ ಅವರನ್ನು ಆಂಧ್ರಪ್ರದೇಶ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

ಇತ್ತ ಸುಪ್ರೀಂಕೋರ್ಟ್ ಶಿಫಾರಸ್ಸಿಗೆ ಬೆಂಗಳೂರು ವಕೀಲರ ಸಂಘ ಆಕ್ಷೇಪ ವ್ಯಕ್ತಪಡಿಸಿದೆ. ದಕ್ಷ ನ್ಯಾಯಮೂರ್ತಿಗಳನ್ನು ಬೇರೆ ರಾಜ್ಯಕ್ಕೆ ವರ್ಗಾಯಿಸದಂತೆ ಒತ್ತಾಯಿಸಿದೆ.

 

 

 

 

 

 

 

 

Leave a Reply

Your email address will not be published. Required fields are marked *