ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಮೂವರು ಆರೋಪಿಗಳನ್ನು ವಿಧಾನಸೌಧ ಠಾಣೆಯ ಪೊಲೀಸರು ಈಗಾಗಲೇ ಬಂಧಿಸಿ ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸಿ ಮತ್ತೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಮೂರು ಆರೋಪಿಗಳ ವಿಚಾರಣೆ ನಡೆಸಿದ ನ್ಯಾಯಾಲಯ ಎಲ್ತಾಜ್ ಹಾಗೂ ಮುನಾವರ್ ಎಂಬವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಈ ಪೈಕಿ ಪ್ರಮುಖ ಆರೋಪಿ ಮೊಹಮ್ಮದ್ ನಾಶಿಪುಡಿ ಎಂಬಾತನನ್ನು ಪೊಲೀಸ್ ವಶಕ್ಕೆ ನೀಡಿ ಆದೇಶಿಸಿದೆ.
ಫೆಬ್ರವರಿ.27ರಂದು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂಬುದಾಗಿ ಘೋಷಣೆ ಕೂಗಿದಂತ ಘಟನೆ ನಡೆದಿತ್ತು. ವಿಧಾನಸೌಧದ ಕಾರಿಡಾರಿನಲ್ಲಿ ನಡೆದಿದ್ದ ಈ ಘಟನೆ ವ್ಯಾಪಕ ಆಕ್ರೋಶಕ್ಕೂ ಕಾರಣವಾಗಿತ್ತು. ಈ ಬಳಿಕ ವಿಧಾನಸೌಧದ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.ಈ ಘಟನೆಯ ಕುರಿತು ತನಿಖೆ ನಡೆಸಿದ್ದ ವಿಧಾನಸೌಧ ಠಾಣೆಯ ಪೊಲೀಸರು ಎಫ್ಎಸ್ ಎಲ್ ವರದಿ ಬಹಿರಂಗವಾದ ಬಳಿಕ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬೆಂಗಳೂರಿನ 39ನೇ ಎಸಿಎಂಎA ಕೋರ್ಟ್ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.
ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.
ಮೂವರು ಆರೋಪಿಗಳ ಪೈಕಿ ಹಾವೇರಿ ಜಿಲ್ಲೆಯ ಬ್ಯಾಡಗಿಯ ಮೊಹಮ್ಮದ್ ಶಫಿ ನಾಶಿಪುಡಿ ಎ1 ಆರೋಪಿಯಾಗಿದ್ದು, ಬೆಂಗಳೂರಿನ ಆರ್ ಟಿ ನಗರದ ನಿವಾಸಿ ಮುನಾವರ್ ಹಾಗೂ ಮತ್ತೊಬ್ಬ ಆರೋಪಿ ಇಲ್ತಾಜ್ ದೆಹಲಿ ಮೂಲದವನು ಎಂಬುದಾಗಿ ಕೇಂದ್ರ ವಿಭಾಗದ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದರು.




