Share this news

ಉಡುಪಿ: ಮಲ್ಪೆಯಲ್ಲಿನ ಕೊಚ್ಚಿನ್ ಶಿಪ್ ಯಾರ್ಡ್ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಉತ್ತರಪ್ರದೇಶ ಮೂಲದ ಇಬ್ಬರು ಕಾರ್ಮಿಕರನ್ನು ಪಾಕಿಸ್ತಾನ ಪರ ಬೇಹುಗಾರಿಕೆ ಮಾಡುತ್ತಿದ್ದ ಆರೋಪದ ಮೇರೆಗೆ ಉಡುಪಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಉತ್ತರ ಪ್ರದೇಶ ಮೂಲದ ರೋಹಿತ್ ಮತ್ತು ಸಂತ್ರಿ ಎಂದು ಗುರುತಿಸಲಾಗಿದೆ.

ಇವರು ಕಿಸ್ತಾನಕ್ಕೆ ರಹಸ್ಯ ಮಾಹಿತಿಯನ್ನು ರವಾನಿಸುತ್ತಿದ್ದರು ಎನ್ನಲಾಗಿದೆ. ಬಂಧಿತರಿಬ್ಬರೂ ಸುಷ್ಮಾ ಮೆರಿನ್ ಪ್ರೈವೇಟ್ ಲಿಮಿಟೆಡ್ ಮೂಲಕ ಗುತ್ತಿಗೆ ಆಧಾರದಲ್ಲಿ ಕೊಚ್ಚಿನ್ ಶಿಪ್ ಯಾರ್ಡ್ನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು. ಕೊಚ್ಚಿನ್ ಶಿಪ್ ಯಾರ್ಡ್ ಸಂಸ್ಥೆಯು ಭಾರತೀಯ ನೌಕಾಪಡೆಗೆ ಟಗ್‌ಗಳನ್ನು ನಿರ್ಮಿಸಿ ಕೊಡುವ ಸಂಸ್ಥೆಯಾಗಿದ್ದು, ಖಾಸಗಿ ಸಂಸ್ಥೆಗಳಿಗೂ ಹಡಗುಗಳನ್ನು ನಿರ್ಮಿಸಿಕೊಡುತ್ತಿದೆ. ಈ ಸಂಸ್ಥೆಯ ಪ್ರಧಾನ ಕಚೇರಿ ಕೇರಳದಲ್ಲಿದೆ.

ಆರೋಪಿಗಳು ಕಳೆದ ಒಂದೂವರೆ ವರ್ಷಗಳಿಂದ ಭಾರತೀಯ ನೌಕಾಪಡೆಯ ಹಡಗುಗಳಿಗೆ ಸಂಬAಧಿಸಿದ ರಹಸ್ಯ ತಾಂತ್ರಿಕ ಮಾಹಿತಿಗಳನ್ನು ವಾಟ್ಸಾಪ್ ಮೂಲಕ ಪಾಕಿಸ್ತಾನದಲ್ಲಿ ಸಂಪರ್ಕದಲ್ಲಿದ್ದವರಿಗೆ ಕಳುಹಿಸುತ್ತಿದ್ದರು ಎನ್ನುವ ಆತಂಕಕಾರಿ ವಿಚಾರ ಬಯಲಾಗಿದೆ. ಕೇರಳದಲ್ಲಿ ಕೆಲಸ ಮಾಡುವ ಸಮಯದಲ್ಲಿ ರೋಹಿತ್ ಹಲವು ಬಾರಿ ಮಾಹಿತಿ ಹಂಚಿಕೊAಡಿದ್ದು, ಮಲ್ಪೆಗೆ ಬರುವವರೆಗೂ ಈ ಚಟುವಟಿಕೆ ಮುಂದುವರಿದಿತ್ತು ಎಂಬುದು ತನಿಖೆಯಿಂದ ತಿಳಿದುಬಂದಿದೆ.
ಈ ಕುರಿತು ಕೊಚ್ಚಿನ್ ಶಿಪ್ ಯಾರ್ಡ್ ಸಿಇಒ ನೀಡಿದ ದೂರಿನ ಆಧಾರದಲ್ಲಿ ಉಡುಪಿ ಪೊಲೀಸರು ಇಬ್ಬರನ್ನೂ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಅವರ ವಿರುದ್ಧ ದೇಶದ ಸಾರ್ವಭೌಮತೆಗೆ ಧಕ್ಕೆ ತರುವ, ಗೌಪ್ಯ ಮಾಹಿತಿ ಮಾರಾಟ ನಡೆಸಿದ ಆರೋಪಗಳ ಅಡಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದ ಕುರಿತು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಾಹಿತಿ ನೀಡಿದ್ದು, ಈಗಾಗಲೇ ಇಬ್ಬರನ್ನು ಬಂಧಿಸಲಾಗಿದ್ದು, ಇದು ದೇಶದ ಭದ್ರತೆಯ ವಿಚಾರದ ಹಿನ್ನಲೆಯಲ್ಲಿ ರಾಷ್ಟಿçÃಯ ತನಿಖಾ ಸಂಸ್ಥೆಗಳು ಹೆಚ್ಚಿನ ತನಿಖೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

     

   

             

     

             

           
   

 

 

   

             

     

             

       
   

 

Leave a Reply

Your email address will not be published. Required fields are marked *