ಉಡುಪಿ : ಉಡುಪಿಗೆ ಸಂಚರಿಸುವ ಬಸ್ಸುಗಳಿಗೆ ಅಂಬಾಗಿಲು – ಗುಂಡಿಬೈಲು ಮಾರ್ಗವಾಗಿ ಸಂಚರಿಸಲು ಪರವಾನಿಗೆ ಇದ್ದರೂ ಬಸ್ಸುಗಳು ಅಂಬಾಗಿಲು ನಿಟ್ಟೂರು ಬನ್ನಂಜೆಯಿಂದ ಉಡುಪಿಗೆ ಹೋಗುತ್ತಿದ್ದವು. ಇದರಿಂದ ಕಳೆದ 15 ವರ್ಷಗಳಿಂದಲೂ ಅಂಬಾಗಿಲು ಗುಂಡಿಬೈಲಿನ ಜನರು ಸರಿಯಾದ ಬಸ್ ವ್ಯವಸ್ಥೆ ಇಲ್ಲದೆ ತೊಂದರೆ ಅನುಭವಿಸುತ್ತಿದ್ದರು.
ಆದ್ದರಿಂದ ಸೆ.18 ರಂದು ಅಂಬಾಗಿಲು ಜಂಕ್ಷನ್ ನಲ್ಲಿ ಬಸ್ಸುಗಳನ್ನು ನಿಲ್ಲಿಸಿ ನಾಮಫಲಕ ಅಳವಡಿಸಿ ಇನ್ನು ಮುಂದೆ ಗುಂಡಿಬೈಲು ಕಲ್ಸಂಕ ಮಾರ್ಗವಾಗಿ ಉಡುಪಿಗೆ ಸಂಚರಿಸಲು ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಆರ್ ಟಿ ಓ ಅಧಿಕಾರಿಗಳು ,ನಗರಸಭಾ ಅಧ್ಯಕ್ಷರಾದ ಪ್ರಭಾಕರ್ ಪೂಜಾರಿ, ಕಕ್ಕುಂಜೆ ವಾರ್ಡಿನ ನಗರಸಭಾ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಕರಂಬಳ್ಳಿ ವಾರ್ಡ್ ನಗರಸಭಾ ಸದಸ್ಯರಾದ ಗಿರಿಧರ್ ಆಚಾರ್ಯ, ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
in