Share this news

ಬೆಂಗಳೂರು: ಗುರುವಾರ ರಾತ್ರಿ ಬೆಂಗಳೂರಿಗೆ ಕೇಂದ್ರ ಸಚಿವ ಅಮಿತ್ ಶಾ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಜೂನ್​ 20 (ಶುಕ್ರುವಾರ) ದಂದು ಬಿಜಿಎಸ್​ (BGS)​ ಮೆಡಿಕಲ್​​ ಕಾಲೇಜು ಕ್ಯಾಂಪಸ್​​ನಲ್ಲಿ ನಡೆಯಲಿರುವ ಉದ್ಘಾಟನಾ  ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಕಾರ್ಯಕ್ರಮ ಮುಗಿಸಿ ಶುಕ್ರವಾರ ಮಧ್ಯಾಹ್ನ ದೆಹಲಿಗೆ ವಾಪಸ್​ ಆಗಲಿದ್ದಾರೆ. ​​

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಷ್ಟ್ರ ರಾಜಧಾನಿಯ ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಚರ್ಚಿಸಿದರು. ಅಮಿತ್ ಶಾ ಅವರೊಂದಿಗಿನ ಚರ್ಚೆ ಸೌಹಾರ್ದಯುತ, ರಚನಾತ್ಮಕ ಮತ್ತು ಅತ್ಯಂತ ಫಲಪ್ರದವಾಗಿತ್ತು ಎಂದು ಭೇಟಿಯ ನಂತರ ರೇಖಾ ಗುಪ್ತಾ ಹೇಳಿದರು. ದೆಹಲಿಯ ಅಭಿವೃದ್ಧಿ ಮತ್ತು ಸಾರ್ವಜನಿಕ ಕಲ್ಯಾಣಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಸರ್ಕಾರದ ಅಧಿಕೃತ ಹೇಳಿಕೆ ತಿಳಿಸಿದೆ.

 

 

 

 

 

 

 

 

Leave a Reply

Your email address will not be published. Required fields are marked *