Share this news

ಉಡುಪಿ: ನಕ್ಸಲ್ ವಿಕ್ರಂ ಗೌಡ ಎನ್‌ಕೌಂಟರ್ ನಕಲಿ ಅಲ್ಲ. ಎನ್‌ಕೌಂಟರ್ ನಕಲಿ ಎಂದು ಅನುಮಾನ ಪಡುವುದು ಬೇಡ. ಅದರ ಬಗ್ಗೆ ನ್ಯಾಯಾಂಗ ತನಿಖೆಯ ಅವಶ್ಯಕತೆ ಇಲ್ಲ. ಅಗತ್ಯವಿದ್ದರೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದ್ದಾರೆ.

ಉಡುಪಿಯ ಗೃಹ ಕಚೇರಿಯಲ್ಲಿ ಶನಿವಾರ ಮಾತನಾಡಿದ ಸಚಿವರು, ಕಾನೂನು ಚೌಕಟ್ಟಿನಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ವಿಕ್ರಮ್ ಗೌಡ ವಿರುದ್ಧ ಹಲವು ಪ್ರಕರಣಗಳು ಇದ್ದವು. ನಕ್ಸಲರನ್ನು ಕಟ್ಟಿ ಹಾಕಬೇಕು ಎಂಬುದು ಸರ್ಕಾರದ ನಿರ್ಧಾರ. ಕೂಂಬಿAಗ್ ಮಾಡುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ವಿಕ್ರಂ ಗೌಡ ಬಳಿ ಕೂಡ ಶಸ್ತ್ರಾಸ್ತ್ರಗಳು ಇದ್ದವು. ವಿಕ್ರಂ ಗೌಡ ಒಂದು ಬಾರಿ ಫೈರಿಂಗ್ ಮಾಡಿದ್ದರಿಂದ ಪ್ರತಿ ದಾಳಿ ಮಾಡದಿದ್ದರೆ ಪೊಲೀಸರ ಜೀವಕ್ಕೆ ಹಾನಿ ಆಗುತ್ತಿತ್ತು ಎಂದರು.

ನಕ್ಸಲರನ್ನು ಬೇರು ಸಹಿತ ಕಿತ್ತು ಹಾಕಬೇಕು. ಇದು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಿಲುವು. ಪರ ವಿರೋಧ ಚರ್ಚೆ ಎಲ್ಲಾ ಸಂದರ್ಭದಲ್ಲಿ ಇರುತ್ತದೆ. ಸರ್ಕಾರ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿದೆ. ಸಂಶಯ ಇದ್ದವರಿಗೆ ನಾವು ಮತ್ತೆ ಸ್ಪಷ್ಟನೆ ಕೊಡಲು ತಯಾರಿದ್ದೇವೆ ಎಂದು ಹೇಳಿದರು.

ವಿಕಲಾಂಗ ಚೇತನ ಹಾಗೂ ಹಿರಿಯ ನಾಗರೀಕ ಇಲಾಖೆಯ ಅನುದಾನ ಕಡಿತ ಮಾಡಲಾಗಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಮ್ಮ ಇಲಾಖೆ 32 ಸಾವಿರ ಕೋಟಿಗಿಂತ ಹೆಚ್ಚಿನ ಗಾತ್ರದ ಬಜೆಟ್ ಹೊಂದಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಾಂಗ ಚೇತನ ಯಾವುದೇ ಅನುದಾನವನ್ನು ನಾವು ಕಡಿತ ಮಾಡುವುದಿಲ್ಲ ಎಂದರು.

ಸಚಿವ ಸಂಪುಟ ವಿಸ್ತರಣೆಯ ಚರ್ಚೆ ಕಾಂಗ್ರೆಸ್ ನಲ್ಲಿ ಇಲ್ಲ. ಮಾಧ್ಯಮಗಳಲ್ಲಿ ಮಾತ್ರ ಈ ಬಗ್ಗೆ ಚರ್ಚೆ ಇತ್ತು. ಸಂಪುಟ ವಿಸ್ತರಣೆ ನಿಜಾನಾ ಸುಳ್ಳ ಅಂತ ನೀವೇ (ಮಾಧ್ಯಮದವರು) ಸ್ಪಷ್ಟಪಡಿಸಬೇಕು. ಯಾರನ್ನು ತೆಗಿತೀರಾ? ಯಾರನ್ನು ಕೂರಿಸ್ತೀರಾ? ಹೊಸದಾಗಿ ಪ್ರಮಾಣವಚನ ಎಂದು ಹೇಳುತ್ತೀರಿ. ಈ ಚರ್ಚೆಗೆ ಮಾಧ್ಯಮಗಳೇ ಸ್ಪಷ್ಟನೆಯನ್ನು ಕೊಡಬೇಕು. ವಿರೋಧ ಪಕ್ಷದ ಒಳಗಿನ ಗಲಾಟೆ ನಮಗೆ ಅನುಕೂಲವಾಗುತ್ತದೆ ಎಂದರು.

ರಾಜ್ಯದಲ್ಲಿ ಅಂಗನವಾಡಿಗೆ 50 ವರ್ಷದ ಇತಿಹಾಸವಿದೆ. 70 ಸಾವಿರ ಅಂಗನವಾಡಿಯಲ್ಲಿ 35 ಲಕ್ಷ ಮಕ್ಕಳ ಪಾಲನೆ ಮಾಡಲಾಗುತ್ತದೆ. ಅಂಗನವಾಡಿಗಳಲ್ಲಿ ಕಳಪೆ ಅಕ್ಕಿ ವಿತರಣೆ, ಆಹಾರ ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ನೀಡಿದರು.

 

 

 

 

 

 

 

 

 

 

 

 

 

 

 

ಕಾರ್ಕಳ:ನಕ್ಸಲ್ ನಿಗ್ರಹ ಪಡೆಯ ಪೊಲೀಸರು ಕುಖ್ಯಾತ ನಕ್ಸಲ್ ವಿಕ್ರಂ ಗೌಡನನ್ನು ಎನ್’ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ. ಪೊಲೀಸರ ಕಾರ್ಯಶೈಲಿ ಶ್ಲಾಘನೀಯ. ಜೀವದ ಹಂಗು ತೊರೆದು ದೇಶ ವಿರೋಧಿ ಶಕ್ತಿಗಳನ್ನು ಯಾವುದೇ ಮುಲಾಜಿಗೆ ಒಳಗಾಗದೇ ಹತ್ತಿಕ್ಕಿದ ANF ಪೊಲೀಸರ ಕಾರ್ಯವೈಖರಿ ಅಭಿನಂದನೀಯ ಎಂದು ಕಾರ್ಕಳ ಶಾಸಕ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹೇಳಿದ್ದಾರೆ.

ಆದರೆ ಈ ಘಟನೆಯ ಬಳಿಕ ಕೆಲವು ಪ್ರಶ್ನೆಗಳು ಉದ್ಭವಿಸಿವೆ. ರಾಜ್ಯದಲ್ಲಿ ಈ ಹಿಂದೆ ಸ್ಥಗಿತಗೊಂಡಿದ್ದ ನಕ್ಸಲ್ ಚಟುವಟಿಕೆ ಇದೀಗ ಹದಿನೈದು ವರ್ಷಗಳ ಬಳಿಕ ಮತ್ತೆ ಕಾಣಿಸಿಕೊಂಡಿದ್ದು,ನಕ್ಸಲರು ಬಹಿರಂಗವಾಗಿ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು ? ಅಥವಾ ಕಾರಣ ಯಾರು ?
ರಾಜ್ಯ ಸರ್ಕಾರ, ಅದರಲ್ಲೂ ವಿಶೇಷವಾಗಿ ಸಿಎಂ ಸಿದ್ದರಾಮಯ್ಯ ಅವರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ನಗರ ನಕ್ಸಲರ ಬಗ್ಗೆ ತೋರುತ್ತಿರುವ ವಿಶೇಷ ಪ್ರೀತಿ ಇದಕ್ಕೆ ಪ್ರೇರಣೆಯಲ್ಲವೇ ?
ಸ್ಥಳೀಯ ಜನಪ್ರತಿನಿಧಿಗಳು ಅಭಿವೃದ್ಧಿ ವಿಚಾರದಲ್ಲಿ ತೋರಿದ ವಿಶೇಷ ಆಸಕ್ತಿಯಿಂದ ಸ್ಥಳೀಯರು ನಕ್ಸಲ್ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಸ್ಥಳೀಯರ ಬೆಂಬಲವಿಲ್ಲದೇ ಅಳಿದು ಹೋಗುವ ಹಂತಕ್ಕೆ ತಲುಪಿದ್ದ ನಕ್ಸಲ್ ಚಟುವಟಿಕೆ ಇದೀಗ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಮತ್ತೆ ತಲೆ ಎತ್ತಿದೆ.

ಸಿದ್ದರಾಮಯ್ಯನವರೇ ದೇಶವಿರೋಧಿ ಹಾಗೂ ಬುಡಮೇಲು ಕೃತ್ಯಕ್ಕೆ ನೆರವಾಗುವವರಿಗೆ ಆದರ್ಶದ ನೆಪದಲ್ಲಿ ಬೆಂಬಲ ರಕ್ಷಣೆ ಬೇಡ. ಇದು ಪಶ್ಚಿಮಘಟ್ಟ ಜನರ ಶಾಂತಿ- ನೆಮ್ಮದಿ ಕೆಡಿಸಲಿದೆ. ಹೀಗಾಗಿ ನಕ್ಸಲ್ ನಿಗ್ರಹ ಕಾರ್ಯಾಚರಣೆಯನ್ನು ಇನ್ನಷ್ಟು ಬಲಗೊಳಿಸಿ. ಎ ಎನ್ಎಫ್ ಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ. ನಕ್ಸಲ್ ಚಟುವಟಿಕೆ ಹತ್ತಿಕ್ಕಿ ಜತೆಗೆ ಪಶ್ಚಿಮಘಟ್ಟ ಭಾಗದಲ್ಲಿ ಅಭಿವೃದ್ಧಿ ಕಾರ್ಯವನ್ನೂ ಚುರುಕುಗೊಳಿಸಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಾಸಕ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನೆಲಸಮಗೊಳಿಸಿ ಅಲ್ಲೇ ಮಸೀದಿಯನ್ನು ಮತ್ತೆ ಕಟ್ಟುತ್ತೇವೆ ಎಂದು ಬಾಂಗ್ಲಾದೇಶಿ ಇಸ್ಲಾಮಿಸ್ಟ್ ಉಗ್ರ ಸಂಘಟನೆ ಪ್ರತಿಜ್ಞೆ ಮಾಡುವ ಮೂಲಕ ಭಾರತದ ವಿರುದ್ಧ ಬಹಿರಂಗ ಬೆದರಿಕೆ ಹಾಕಿದೆ.

ನಾವು ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಲು ಕೆಲಸ ಮಾಡುತ್ತಿದ್ದೇವೆ. ಇಸ್ಲಾಮಿಕ್ ಯುವಕರೇ, ನಿಮ್ಮ ಬಳಿ ಏನಿದೆಯೋ ಅದರೊಂದಿಗೆ ಸಿದ್ಧರಾಗಿರಿ, ಏಕೆಂದರೆ ಭಾರತದ ಮೇಲೆ ದಾಳಿ ಮಾಡಬೇಕು.ನಾವು ರಾಮ ಮಂದಿರವನ್ನು ನೆಲಸಮಗೊಳಿಸಿ ಮತ್ತೆ ಮಸೀದಿಯನ್ನು ನಿರ್ಮಿಸುತ್ತೇವೆ. ನರೇಂದ್ರ ಮೋದಿ ಅವರ ಎರಡೂ ಕೆನ್ನೆಗಳಿಗೆ ಶೂಗಳಿಂದ ಹೊಡೆಯುತ್ತೇನೆ. ಆಟವನ್ನು ಅವರೊಂದಿಗೆ ಆಡುತ್ತೇವೆ, ನಾವು ಸಿದ್ಧರಿದ್ದೇವೆ” ಎಂದು ತೀವ್ರಗಾಮಿ ಬಾಂಗ್ಲಾದೇಶಿ ಇಸ್ಲಾಮಿಸ್ಟ್ ವಿಡಿಯೋದಲ್ಲಿ ಘೋಷಿಸಿದ್ದಾನೆ.

ಬಾಂಗ್ಲಾದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ, ವಿಶೇಷವಾಗಿ ಹಿಂದೂ ಸಮುದಾಯದ ಸುರಕ್ಷತೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ ಈ ವೀಡಿಯೊ ಬಂದಿದೆ. ಇತ್ತೀಚಿನ ವಾರಗಳಲ್ಲಿ ಹಿಂದೂ ಮನೆಗಳು, ವ್ಯವಹಾರಗಳು ಮತ್ತು ಧಾರ್ಮಿಕ ಸ್ಥಳಗಳ ಮೇಲೆ ದಾಳಿಗಳು ಆತಂಕಕಾರಿಯಾಗಿ ಹೆಚ್ಚುತ್ತಿದ್ದು, ಮಾನವ ಹಕ್ಕುಗಳ ಸಂಘಟನೆಗಳಲ್ಲಿ ಎಚ್ಚರಿಕೆಯನ್ನು ಹೆಚ್ಚಿಸಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

ಕಾರ್ಕಳ:ನಕ್ಸಲ್ ನಿಗ್ರಹ ಪಡೆಯ ಪೊಲೀಸರು ಕುಖ್ಯಾತ ನಕ್ಸಲ್ ವಿಕ್ರಂ ಗೌಡನನ್ನು ಎನ್’ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ. ಪೊಲೀಸರ ಕಾರ್ಯಶೈಲಿ ಶ್ಲಾಘನೀಯ. ಜೀವದ ಹಂಗು ತೊರೆದು ದೇಶ ವಿರೋಧಿ ಶಕ್ತಿಗಳನ್ನು ಯಾವುದೇ ಮುಲಾಜಿಗೆ ಒಳಗಾಗದೇ ಹತ್ತಿಕ್ಕಿದ ANF ಪೊಲೀಸರ ಕಾರ್ಯವೈಖರಿ ಅಭಿನಂದನೀಯ ಎಂದು ಕಾರ್ಕಳ ಶಾಸಕ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹೇಳಿದ್ದಾರೆ.

ಆದರೆ ಈ ಘಟನೆಯ ಬಳಿಕ ಕೆಲವು ಪ್ರಶ್ನೆಗಳು ಉದ್ಭವಿಸಿವೆ. ರಾಜ್ಯದಲ್ಲಿ ಈ ಹಿಂದೆ ಸ್ಥಗಿತಗೊಂಡಿದ್ದ ನಕ್ಸಲ್ ಚಟುವಟಿಕೆ ಇದೀಗ ಹದಿನೈದು ವರ್ಷಗಳ ಬಳಿಕ ಮತ್ತೆ ಕಾಣಿಸಿಕೊಂಡಿದ್ದು,ನಕ್ಸಲರು ಬಹಿರಂಗವಾಗಿ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು ? ಅಥವಾ ಕಾರಣ ಯಾರು ?
ರಾಜ್ಯ ಸರ್ಕಾರ, ಅದರಲ್ಲೂ ವಿಶೇಷವಾಗಿ ಸಿಎಂ ಸಿದ್ದರಾಮಯ್ಯ ಅವರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ನಗರ ನಕ್ಸಲರ ಬಗ್ಗೆ ತೋರುತ್ತಿರುವ ವಿಶೇಷ ಪ್ರೀತಿ ಇದಕ್ಕೆ ಪ್ರೇರಣೆಯಲ್ಲವೇ ?
ಸ್ಥಳೀಯ ಜನಪ್ರತಿನಿಧಿಗಳು ಅಭಿವೃದ್ಧಿ ವಿಚಾರದಲ್ಲಿ ತೋರಿದ ವಿಶೇಷ ಆಸಕ್ತಿಯಿಂದ ಸ್ಥಳೀಯರು ನಕ್ಸಲ್ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಸ್ಥಳೀಯರ ಬೆಂಬಲವಿಲ್ಲದೇ ಅಳಿದು ಹೋಗುವ ಹಂತಕ್ಕೆ ತಲುಪಿದ್ದ ನಕ್ಸಲ್ ಚಟುವಟಿಕೆ ಇದೀಗ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಮತ್ತೆ ತಲೆ ಎತ್ತಿದೆ.

ಸಿದ್ದರಾಮಯ್ಯನವರೇ ದೇಶವಿರೋಧಿ ಹಾಗೂ ಬುಡಮೇಲು ಕೃತ್ಯಕ್ಕೆ ನೆರವಾಗುವವರಿಗೆ ಆದರ್ಶದ ನೆಪದಲ್ಲಿ ಬೆಂಬಲ ರಕ್ಷಣೆ ಬೇಡ. ಇದು ಪಶ್ಚಿಮಘಟ್ಟ ಜನರ ಶಾಂತಿ- ನೆಮ್ಮದಿ ಕೆಡಿಸಲಿದೆ. ಹೀಗಾಗಿ ನಕ್ಸಲ್ ನಿಗ್ರಹ ಕಾರ್ಯಾಚರಣೆಯನ್ನು ಇನ್ನಷ್ಟು ಬಲಗೊಳಿಸಿ. ಎ ಎನ್ಎಫ್ ಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ. ನಕ್ಸಲ್ ಚಟುವಟಿಕೆ ಹತ್ತಿಕ್ಕಿ ಜತೆಗೆ ಪಶ್ಚಿಮಘಟ್ಟ ಭಾಗದಲ್ಲಿ ಅಭಿವೃದ್ಧಿ ಕಾರ್ಯವನ್ನೂ ಚುರುಕುಗೊಳಿಸಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಾಸಕ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನೆಲಸಮಗೊಳಿಸಿ ಅಲ್ಲೇ ಮಸೀದಿಯನ್ನು ಮತ್ತೆ ಕಟ್ಟುತ್ತೇವೆ ಎಂದು ಬಾಂಗ್ಲಾದೇಶಿ ಇಸ್ಲಾಮಿಸ್ಟ್ ಉಗ್ರ ಸಂಘಟನೆ ಪ್ರತಿಜ್ಞೆ ಮಾಡುವ ಮೂಲಕ ಭಾರತದ ವಿರುದ್ಧ ಬಹಿರಂಗ ಬೆದರಿಕೆ ಹಾಕಿದೆ.

ನಾವು ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಲು ಕೆಲಸ ಮಾಡುತ್ತಿದ್ದೇವೆ. ಇಸ್ಲಾಮಿಕ್ ಯುವಕರೇ, ನಿಮ್ಮ ಬಳಿ ಏನಿದೆಯೋ ಅದರೊಂದಿಗೆ ಸಿದ್ಧರಾಗಿರಿ, ಏಕೆಂದರೆ ಭಾರತದ ಮೇಲೆ ದಾಳಿ ಮಾಡಬೇಕು.ನಾವು ರಾಮ ಮಂದಿರವನ್ನು ನೆಲಸಮಗೊಳಿಸಿ ಮತ್ತೆ ಮಸೀದಿಯನ್ನು ನಿರ್ಮಿಸುತ್ತೇವೆ. ನರೇಂದ್ರ ಮೋದಿ ಅವರ ಎರಡೂ ಕೆನ್ನೆಗಳಿಗೆ ಶೂಗಳಿಂದ ಹೊಡೆಯುತ್ತೇನೆ. ಆಟವನ್ನು ಅವರೊಂದಿಗೆ ಆಡುತ್ತೇವೆ, ನಾವು ಸಿದ್ಧರಿದ್ದೇವೆ” ಎಂದು ತೀವ್ರಗಾಮಿ ಬಾಂಗ್ಲಾದೇಶಿ ಇಸ್ಲಾಮಿಸ್ಟ್ ವಿಡಿಯೋದಲ್ಲಿ ಘೋಷಿಸಿದ್ದಾನೆ.

ಬಾಂಗ್ಲಾದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ, ವಿಶೇಷವಾಗಿ ಹಿಂದೂ ಸಮುದಾಯದ ಸುರಕ್ಷತೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ ಈ ವೀಡಿಯೊ ಬಂದಿದೆ. ಇತ್ತೀಚಿನ ವಾರಗಳಲ್ಲಿ ಹಿಂದೂ ಮನೆಗಳು, ವ್ಯವಹಾರಗಳು ಮತ್ತು ಧಾರ್ಮಿಕ ಸ್ಥಳಗಳ ಮೇಲೆ ದಾಳಿಗಳು ಆತಂಕಕಾರಿಯಾಗಿ ಹೆಚ್ಚುತ್ತಿದ್ದು, ಮಾನವ ಹಕ್ಕುಗಳ ಸಂಘಟನೆಗಳಲ್ಲಿ ಎಚ್ಚರಿಕೆಯನ್ನು ಹೆಚ್ಚಿಸಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *